ಗೌಹಾಟಿ : ಅಸ್ಸಾಂ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕರಾದ ಹಿಮಂತ್ ಬಿಸ್ವ ಸರ್ಮ ಅವರು ಚುನಾವಣಾ ಪ್ರಚಾರ ಮಾಡುವುದನ್ನು ನಿಷೇಧಿಸಿರುವ ಚುನಾವಣಾ ಆಯೋಗದ ಆದೇಶದ ವಿರುದ್ಧ ಸರ್ಮ ಇಂದು ಗೌಹಾಟಿ ಹೈಕೋರ್ಟ್ನಲ್ಲಿ ಅಪೀಲು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ದೂರಿನ ಮೇರೆಗೆ ನಿನ್ನೆ ರಾತ್ರಿ ಆಯೋಗವು ಸರ್ಮ ಅವರು 48 ಗಂಟೆಗಳ ಕಾಲ ಕ್ಯಾಂಪೇನ್ ಮಾಡದಂತೆ ನಿಷೇಧಾಜ್ನೆ ಹೊರಡಿಸಿತ್ತು. ಸರ್ಮ ಅವರು, ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ನ ಹಗ್ರಾಮಾ ಮೊಹಿಲರಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ದುರ್ಬಳಕೆ ಮಾಡಿ ಜೈಲಿಗೆ ಕಳುಹಿಸುವುದಾಗಿ ಬಹಿರಂಗವಾಗಿ ಧಮಕಿ ಹಾಕಿದ್ದರು ಎಂದು ಆರೋಪಿಸಲಾಗಿತ್ತು.
ಇದನ್ನೂ ಓದಿ: ಮಸ್ಕಿ ಉಪಚುನಾವಣೆಯ ಪ್ರಚಾರಕ್ಕೆ ಆಗಮಿಸಿದ ಬಿಜೆಪಿ ನಾಯಕರಿಗೆ ಗ್ರಾಮಸ್ಥರ ತರಾಟೆ!
ಆಯೋಗದ ನಿಷೇಧಾಜ್ನೆಯಿಂದಾಗಿ ರಾಜ್ಯದಲ್ಲಿ ಬಿಜೆಪಿಯ ಸ್ಟಾರ್ ಕಾಂಪೇನರ್ಗಳಲ್ಲಿ ಒಬ್ಬರಾದ ಸರ್ಮ, ಪಕ್ಷದ ಚುನಾವಣಾ ಕಾರ್ಯನಿರ್ವಾಹಕರಾಗಿದ್ದಾರೆ ಕೂಡ. ಅವರು ಪ್ರಚಾರದಲ್ಲಿ ಭಾಗವಹಿಸದಿದ್ದರೆ ರಾಜ್ಯದಲ್ಲಿ ಬಿಜೆಪಿಗೆ ಭಾರೀ ಹೊಡೆತ ಬಿದ್ದಂತೆ ಎನ್ನಲಾಗಿದೆ. (ಏಜೆನ್ಸೀಸ್)
ಅಭ್ಯರ್ಥಿ ಕಾರಿನಲ್ಲಿ ಇವಿಎಂ ಸಾಗಣೆ : ಮರುಮತದಾನ ಆದೇಶಿಸಿದ ಚುನಾವಣಾ ಆಯೋಗ