ಲಕ್ನೋ: ಬಸ್ ಪಲ್ಟಿಯಾಗಿ 5 ಮಂದಿ ಮೃತಪಟ್ಟು, 15 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ. ಈ ಘಟನೆ ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಮಧುಘರ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಬಳಿ ನಡೆದಿದೆ.
ಮದುವೆ ಮನೆಯಿಂದ 40 ಮಂದಿ ಅತಿಥಿಗಳನ್ನು ಹೊತ್ತುಕೊಂಡು ಬರುತ್ತಿದ್ದ ಬಸ್ಸಿಗೆ ಬೇರೆ ಇನ್ನೊಂದು ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಪಲ್ಟಿಯಾಗಿದ್ದು, ಬಸ್ಸಿನಲ್ಲಿದ್ದ 40 ಜನರಲ್ಲಿ ಐವರು ಮೃತಪಟ್ಟಿದ್ದಾರೆ, ಇನ್ನುಳಿದ 15 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋಗೆ ಕ್ಷಣಗಣನೆ: ತುಂತುರು ಮಳೆ ಮಧ್ಯೆಯೇ ಜಮಾಯಿಸಿದ ಜನರು
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗರ್ಲ್ಫ್ರೆಂಡ್ ಮಲಗಿದ ಬಳಿಕ ಮತ್ತೊಂದು ಯುವತಿ ಮೇಲೆ ಕಣ್ಣು: ಪ್ಯಾಂಟ್ ಜಿಪ್ ಓಪನ್, ಸಿಕ್ಕಿಬಿದ್ದ ಯುವಕ