More

    ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಹಾರಿ ಪಲ್ಟಿ ಹೊಡೆದ ಕಾರು; ಬೈಕ್​ ಸವಾರ ಸೇರಿ ಐವರು ದುರ್ಮರಣ

    ಚೆನ್ನೈ: ದೇವರ ಉತ್ಸವ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದು ಕುಟುಂಬದ ನಾಲ್ವರು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಮಂಗಲಂ ಬಳಿಯ ವಿರುದುನಗರ-ಮದುರೈ ಹೆದ್ದಾರಿಯ ಶಿವರಕೊಟ್ಟೈನಲ್ಲಿ ನಡೆದಿದೆ.

    ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೃತರನ್ನು ಮಣಿ, ನಾಗಜ್ಯೋತಿ, ಕನಗವೇಲ್, ಕೃಷ್ಣವೇಣಿ ಮತ್ತು ಪಾಂಡಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 8 ವರ್ಷದ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದನ್ನೂ ಓದಿ: RSS ಗಣವೇಷದಲ್ಲೇ ಕಾಂಗ್ರೆಸ್​ ಸೇರ್ಪಡೆಯಾದ ಬಿಜೆಪಿ ನಾಯಕ

    ವೈರಲ್​ ಆಗಿರುವ ವಿಡಿಯೋದಲ್ಲಿ ಬಿಳಿ ಬಣ್ಣದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮೊದಲು ಡಿವೈಡರ್​ಗೆ ಡಿಕ್ಕಿ ಹೊಡೆಯುತ್ತದೆ. ಬಳಿಕ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಬಳಿಕ ಮತ್ತೊಂದು ಬದಿಯ ಸರ್ವೀಸ್​ ರಸ್ತೆಯಲ್ಲಿ ಪಲ್ಟಿಯಾಗುವುದನ್ನು ನೋಡಬಹುದಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದೇವರತ ಉತ್ಸವ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

    ಸ್ಥಳಕ್ಕೆ ಭೇಟಿ ನೀಡಿದ ಕಲ್ಲಿಕುಡಿ ಪೊಲೀಸ್​ ಅಧಿಕಾರಿಗಳು ಪರಿಶೀಲನೆ ನಡೆಸಿ ಮೃತದೇಹಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts