ಸ್ವರ್ಣ ಮಂದಿರದಲ್ಲಿ ವ್ಯಕ್ತಿಯಿಂದ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ; ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Golden Temple

ಅಮೃತಸರ: ಪಂಜಾಬ್​ನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಸ್ವರ್ಣ ಮಂದಿರದಲ್ಲಿ ವ್ಯಕ್ತಿಯೊಬ್ಬ ಜನರ ಮೇಲೆ ದಾಳಿ ಮಾಡಿದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಸ್ವರ್ಣ ಮಂದಿರದ ಗುರು ರಾಮ್​ದಾಸ್ ಲಂಗರ್​ನಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಅಲ್ಲಿದ್ದ ಜನರು ಆರೋಪಿಯನ್ನು ಹಿಡಿದಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿ ಸರ್ಮೆಲ್​ ಸಿಂಗ್, ಆರೋಪಿಯನ್ನು ಹರಿಯಾಣ ನಿವಾಸಿ ಜುಲ್ಫಾನ್ ಎಂದು ಗುರುತಿಸಲಾಗಿದ್ದು, ಈತ ಜನರ ಮೇಲೆ ಹಲ್ಲೆ ಮಾಡುವುದಕ್ಕೂ ಮುನ್ನ ಮಂದಿರದ ಸುತ್ತ ಸರ್ವೇ ಮಾಡಿದ್ದ. ಈತನ ಜತೆಗಿದ್ದ ಇನ್ನೋರ್ವ ಆರೋಪಿ ತಪ್ಪಿಸಿಕೊಂಡಿದ್ದು, ಆತನನ್ನು ಹುಡುಕಲಾಗುತ್ತಿದೆ. 

ಆರೋಪಿ ಭಕ್ತರ ಮೇಲೆ ರಾಡ್​ನಿಂದ ಹಲ್ಲೆ ನಡೆಸಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ. ಇನ್ನು ನಾಲ್ಕು ಮಂದಿಯ ಆರೋಗ್ಯ ಸ್ಥಿರವಾಗಿದ್ದು, ಹಲ್ಲೆಗೊಳಗಾಗಿದ್ದ ಆರೋಪಿಯು ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸರ್ಮೆಲ್​ ಸಿಂಗ್ ತಿಳಿಸಿದ್ಧಾರೆ.

ರಸ್ತೆ ಬದಿ ನಿಂತಿದ್ದ ಯುವಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು; ಆಘಾತಕಾರಿ Video Viral

ಗಾಯಕ್ಕೆ ತುತ್ತಾಗಿದ್ದ ಆಟಗಾರ ಈಗ ಸಂಪೂರ್ಣ ಫಿಟ್​; ಐಪಿಎಲ್ ಆರಂಭಕ್ಕೂ ಮುನ್ನ ಎಲ್​ಎಸ್​ಜಿಗೆ ಸಿಕ್ತು ಭರ್ಜರಿ ಸುದ್ದಿ

Share This Article

ತಿಂದ ನಂತರವೂ ಹಸಿವಾಗುತ್ತಿದ್ಯಾ? ಹಾಗಾದರೆ ಹಸಿವನ್ನು ನಿಯಂತ್ರಿಸಲು ಇವುಗಳನ್ನು ತಿನ್ನಿರಿ… hungry

hungry: ಕೆಲವರಿಗೆ ಏನು ತಿಂದರೂ ಮತ್ತೆ ಬೇಗನೆ ಹಸಿವಾಗುತ್ತದೆ. ಅದು ನನಗೆ ಚಾಟ್, ಮಸಾಲಗಳು, ಬಜ್ಜಿ…

ನಿಮ್ಮ ಕನಸಿನಲ್ಲಿ ಗಿಳಿ, ಗೂಬೆ, ನವಿಲು ಕಾಣಿಸಿಕೊಂಡಿದ್ಯಾ? ಈ ಪಕ್ಷಿಗಳಿಂದ ಬರಲಿದ್ಯಾ ಅದೃಷ್ಟ.. dreams

dreams: ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕನಸುಗಳು ಬಹಳ ಮುಖ್ಯ. ಕನಸಿನಲ್ಲಿ ಗಿಳಿ, ಗೂಬೆ, ನವಿಲು ಮುಂತಾದ…