ಕಾಶಿ ಪೀಠದಿಂದ ದೇಣಿಗೆ: ಪಿಎಂ ಕೇರ್ಸ್​ಗೆ 5 ಲಕ್ಷ ರೂ. ಚೆಕ್

blank

ಧಾರವಾಡ: ಕರೊನಾ ನಿಯಂತ್ರಣದ ವ್ಯಾಕ್ಸಿನೇಷನ್ ನಿರ್ವಹಣೆಗಾಗಿಯೇ ಕಾಶಿ ಜಗದ್ಗುರು ಪೀಠದಿಂದ ಪಿಎಂ ಕೇರ್ಸ್ ಫಂಡ್​ಗೆ 5 ಲಕ್ಷ ರೂ. ದೇಣಿಗೆಯನ್ನು ವಾರಣಾಸಿ ವಿಭಾಗಾಧಿಕಾರಿ ದೀಪಕ್ ಅಗರ್​ವಾಲ್ ಮೂಲಕ ಭಾನುವಾರ ಸಮರ್ಪಿಸಲಾಯಿತು.

ನಂತರ ಮಾತನಾಡಿದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಕರೊನಾದಿಂದ ಆಗಿರುವ ಸಾವು-ನೋವುಗಳ ಸಂಖ್ಯೆ ಅಧಿಕಗೊಂಡು ಜನರು ಭಯಭೀತಗೊಂಡಿದ್ದಾರೆ. ಸರ್ವರನ್ನು ರಕ್ಷಿಸುವ ವೈಜ್ಞಾನಿಕ ರಕ್ಷಾಕವಚ ಅಂದರೆ ಅದು ವ್ಯಾಕ್ಸಿನೇಷನ್ ಮಾತ್ರ. ಲಸಿಕೆಯ ರಕ್ಷಾಕವಚ ಭಾರತೀಯರಿಗೆ ದೊರೆಯಲೆಂಬ ಉದ್ದೇಶದಿಂದ ಕಾಶಿ ಪೀಠವು ತನ್ನ ಪಾಲಿನ ದೇಣಿಗೆಯನ್ನು ಕೊಡಮಾಡಿದೆ. ಅಲಕ್ಷ್ಯ ವಹಿಸದೆ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

‘ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾಗಿರುವ ಕಾಶಿ ಪೀಠವು ಕೋವಿಡ್ ಕೇರ್ ಸೆಂಟರ್ ತೆರೆಯುವುದರೊಂದಿಗೆ, ಕೊರೋನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಆಶ್ರಯ, ಊಟ ಹಾಗೂ ಶಿಕ್ಷಣದ ಜವಾಬ್ದಾರಿಯನ್ನು ಹೊತ್ತಿರುವುದು ಆದರ್ಶಪ್ರಾಯವಾದ ಸಾಮಾಜಿಕ ಸೇವೆ’ ಎಂದು ದೀಪಕ್ ಅಗರ್​ವಾಲ್ ಪ್ರಶಂಶಿಸಿದರು.

TAGGED:
Share This Article

ಚಳಿಗಾಲದಲ್ಲಿ ಅಲೋವೆರಾ ಜೆಲ್ ಅನ್ನು ತಲೆಗೆ ಹಚ್ಚಿಕೊಳ್ಳಬಹುದೇ? aloe vera gel benefits

aloe vera gel benefits : ಚಳಿಗಾಲದಲ್ಲಿ ತಲೆಹೊಟ್ಟು ಸಾಮಾನ್ಯ. ಚಳಿಗಾಲದಲ್ಲಿ ಶುಷ್ಕ ಗಾಳಿಯು ನಮ್ಮ…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತೆಂಗಿನೆಣ್ಣೆ ಕುಡಿದರೆ ಏನಾಗುತ್ತೆ ಗೊತ್ತಾ? Coconut Oil Benefits

Coconut Oil Benefits:  ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವ ಆಹಾರವೇ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ.…

ಕಣ್ಣಿಗೊಂದು ಸವಾಲ್…ಈ ಫೋಟೋದಲ್ಲಿರುವ ಹಾವನ್ನು ಗುರುತಿಸಬಲ್ಲಿರಾ? Optical Illusion..

Optical Illusion: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ…