ಚಿಕ್ಕಬಳ್ಳಾಪುರ: ಮಾರಕ ಕರೊನಾ ವೈರಸ್ ಸೋಂಕು ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು ಗೌರಿಬಿದನೂರು ನಗರದಲ್ಲಿ 5 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.
ಕರೊನಾ ವೈರಸ್ ಸೋಂಕು ಹರಡಿದ ಲಕ್ಷಣ ಗೋಚರಿಸಿದ 7 ಮಂದಿಯ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ 7 ಮಂದಿಗೂ ಸೋಂಕು ಹರಡಿರುವುದು ಪತ್ತೆಯಾಗಿದೆ. ಅನುಮಾನ ಬಂದ ಹಿನ್ನೆಲೆಯಲ್ಲಿ ಇಬ್ಬರ ಶಂಕಿತರ ರಕ್ತದ ಮಾದರಿ ಸಂಗ್ರಹಿಸಿ ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಮಾಹಿತಿ ನೀಡಿದರು.
ಕರೊನಾ ವೈರಸ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಮಗ, ಆಕೆ ಸೊಸೆ ಹಾಗೂ ಮೊಮ್ಮಗನಿಗೆ ಸೋಂಕು ಹರಡಿದೆ. ಇವರನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. (ದಿಗ್ವಿಜಯ ನ್ಯೂಸ್)