More

    50 ಕೋಟಿ ರೂ. ನೆರವಿಗೆ ಬೇಡಿಕೆ

    ಎಂ.ಕೆ.ಹುಬ್ಬಳ್ಳಿ: ಸ್ಥಳೀಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಹಾಗೂ ರೈತರಿಗೆ ಸಕಾಲದಲ್ಲಿ ಕಬ್ಬಿನ ಬಿಲ್ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದಿಂದ 50 ಕೋಟಿ ರೂ. ಆರ್ಥಿಕ ನೆರವು ಒದಗಿಸಬೇಕು ಎಂದು ಕಾರ್ಖಾನೆ ನಿರ್ದೇಶಕರು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಈಚೆಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.

    ಕಾರ್ಖಾನೆ ಸ್ಥಿತಿಗತಿ ಬಗ್ಗೆ ಸಮಗ್ರವಾಗಿ ವಿವರಿಸಿದ ನಿರ್ದೇಶಕ ಅಶೋಕ ಯಮಕನಮರಡಿ ಅವರು, ಶೀಘ್ರವೇ ಆರ್ಥಿಕ ನೆರವು ಕಲ್ಪಿಸಬೇಕು. ಕಾರ್ಖಾನೆ ಪುನಶ್ಚೇತನಕ್ಕೆ ಸಹಕಾರ ನೀಡುವ ಮೂಲಕ ರೈತರ ಜೀವನಾಡಿ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ವಿನಂತಿಸಿದರು.

    ನಿರ್ದೇಶಕರಾದ ಲಕ್ಷ್ಮಣ ಎಮ್ಮಿ, ಶಂಕರಗೌಡ ಪಾಟೀಲ, ಮಂಜುನಾಥ ಪಾಟೀಲ, ಜ್ಯೋತಿಬಾ ಹೈಬತ್ತಿ, ಬಸವರಾಜ ಬೆಂಡಿಗೇರಿ, ಅಶೋಕ ಬೆಂಡಿಗೇರಿ, ಭರತೇಶ ಶೇಬಣ್ಣವರ, ಸಂಜೀವ ಹುಬಳೆಪ್ಪನವರ, ಸಿದ್ದಪ್ಪ ದೂರಪ್ಪನವರ, ಬಸವರಾಜ ಪುಂಡಿ, ಸಾವಂತ ಕಿರಬನವರ, ಮೀನಾಕ್ಷಿ ನೆಲಗಳಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts