ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಮಹಾರಾಷ್ಟ್ರ ಸರ್ಕಾರ ಇಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಶಾಲಾ ಕಾಲೇಜುಗಳನ್ನು ಈಗಾಗಲೇ ಬಂದ್ ಮಾಡಿರುವ ಅಲ್ಲಿನ ಸರ್ಕಾರ, ಚಿತ್ರಮಂದಿರ, ಆಡಿಟೋರಿಯಮ್ಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಶೇ 50 ರಷ್ಟು ಜನಕ್ಕೆ ಮಾತ್ರ ಪ್ರವೇಶ ಕಲ್ಪಿಸುವ ಆದೇಶ ನೀಡಿದೆ. ಮಾರ್ಚ್ 31 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಆರೋಗ್ಯ ಹಾಗೂ ತುರ್ತು ಸೇವೆಗೆ ಇದರಲ್ಲಿ ವಿನಾಯಿತಿ ಇದೆ.
ಇದನ್ನೂ ಓದಿ: ಸಿಎಂ ಸಾಹೇಬ್ರೆ… ಹೊಗಳುಭಟ್ಟರ ಕಾಲ ಹೋಯ್ತು… ನಿಮ್ ಸುತ್ತಲೂ ಇರೋ ಬ್ಯಾಂಡ್ಸೆಟ್ನವ್ರನ್ನ ನಿಯಂತ್ರಿಸಿ…
ಗುರುವಾರದ ಒಂದೇ ದಿನ ಮಹಾರಾಷ್ಟ್ರದಲ್ಲಿ 25,833 ಹೊಸ ಸೋಂಕಿತ ಪ್ರಕರಣಗಳು ಕಂಡು ಬಂದಿದ್ದು, ರಾಜ್ಯ ಸಂಪೂರ್ಣ ಲಾಕ್ಡೌನ್ನತ್ತ ಹೊರಳಲಿದೆಯೇ ಎಂಬುದನ್ನು ಇದು ಬಲವಾಗಿ ಸೂಚಿಸುತ್ತದೆ.
ಈಗಾಗಲೇ ಕೇಂದ್ರ ಸರ್ಕಾರ ಕರೊನಾವೈರಸ್ನ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಕಂಡು ಬಂದಿದೆ ಎಂದು ಹೇಳಿರುವುದರಿಂದ ಜನರು ಸುರಕ್ಷತಾ ಕ್ರಮಗಳನ್ನು ಪಾಲಿಸದಿದ್ದರೇ ಲಾಕ್ಡೌನ್ ಜಾರಿಗೊಳಿಸಲಾಗುವುದು ಎಂಬ ಎಚ್ಚರಿಕೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿದ್ದಾರೆ.
ಕೆಲಸಕ್ಕೆ ರಾಜೀನಾಮೆ ನೀಡಿ ‘ಅಡಲ್ಟ್ ಸ್ಟಾರ್’ ಆದ ಮಾಜಿ ಪೊಲೀಸ್ ಅಧಿಕಾರಿ: ಕಾರಣ ಕೇಳಿದ್ರೆ ಬೆರಗಾಗ್ತಿರಾ!
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಮಹಿಳಾ ಸಿಬ್ಬಂದಿಗಳಿಬ್ಬರ ಭರ್ಜರಿ ಎಣ್ಣೆ ಪಾರ್ಟಿ!