More

    ಸಮಾವೇಶಕ್ಕೆ ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಕರ್ಕೊಂಡು ಬರಬೇಕು; ಸಿದ್ದರಾಮಯ್ಯ ಆಡಿಯೋ ವೈರಲ್

    ಬೆಂಗಳೂರು: ಪಕ್ಷದ ಪ್ರಚಾರ ಸಭೆಗಳಿಗೆ ಹೆಚ್ಚು ಜನರನ್ನು ಕರೆ ತರಬೇಕು. ಐನೂರು ರೂಪಾಯಿ ನೀಡಿ ಜನರನ್ನು ಸೇರಿಸುವ ವ್ಯವಸ್ಥೆ ಮಾಡಬೇಕು ಎಂದು ಬೆಳಗಾವಿಯ ಪ್ರಜಾಧ್ವನಿ ಸಮಾವೇಶ ಮುಗಿಸಿ ವಾಪಸ್ ಆಗುತ್ತಿದ್ದಾಗ ಮಾಜಿ ಸಿಎಂ ಸಿದ್ದರಾಮಯ್ಯ ಮಾತಾಡಿರುವ ವಿಡಿಯೋ ವೈರಲ್ ಆಗಿದೆ.

    ವಿಡಿಯೋದಲ್ಲಿ ಏನಿದೆ?:  ಸಮಾವೇಶಕ್ಕೆ ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಕರೆದುಕೊಂಡು ಬರಬೇಕು. ಬಿಜೆಪಿಯವರು ಕರೆದುಕೊಂಡು ಬರುತ್ತಾರೆ​. ನಾವು ಜನರನ್ನ ಸೇರಿಸಬೇಕು ಅಂತಾ ಪ್ರಜಾಧ್ವನಿ ಯಾತ್ರೆ ಬಸ್​ನಲ್ಲಿ ಸಿದ್ದರಾಮಯ್ಯ ಆಡಿದ ಮಾತು ವೈರಲ್ ವೈರಲ್ ಆಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.

    ಇದನ್ನೂ ಓದಿ: ಕೋವಿಡ್ ಲಸಿಕೆ ನಂತರ ಹೃದಯಾಘಾತ, ಸಕ್ಕರೆ ಕಾಯಿಲೆ ಹೆಚ್ಚಳ!

    ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋನವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿರುವ ಬಿಜೆಪಿ, ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. ಆ ಕಡೆ ಅದೂ ಇಲ್ಲ, ಈ ಕಡೆ ಇದೂ ಇಲ್ಲ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

    ಭಾರತದ ವಿರುದ್ಧ ಚೀನಾ ಹೊಸ ತಂತ್ರ; ಹಿಂದಿ ಭಾಷೆಯನ್ನು ಡಿಕೋಡ್ ಮಾಡಲು 19 ಭಾಷಾಂತರಕಾರರ ನೇಮಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts