More

    ಮಾರ್ಚ ಅಂತ್ಯಕ್ಕೆ 5000 ನೂತನ ಬಸ್ ಪೂರೈಕೆ:ಸಚಿವ ರಾಮಲಿಂಗರೆಡ್ಡಿ

    ವಿಜಯವಾಣಿ ಸುದ್ದಿಜಾಲ ಗದಗ

    ರಾಜ್ಯದಲ್ಲಿ 325 ನೂತನ ಬಸ್ ಖರೀದಿಗೆ ಸದ್ಯದಲ್ಲೇ ಟೆಂಡರ್ ಜರುಗಿಸಿ ಬಸ್ ಖರೀದಿಸಾಗುವುದು. ಒಟ್ಟಾರೆ 5000 ಬಸ್ ಖರೀದಿ ಮಾಡಿ ಮಾರ್ಚ ಅಂತ್ಯಕ್ಕೆ ಪೂರೈಕೆ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.

    ನಗರದ ಹೊಸ ಬಸ್ ನಿಲ್ದಾಣದಲ್ಲಿ ನೂತನ 50 ಬಸ್ ಗಳ ಲೋಕಾರ್ಪಣೆ, ಅಪಘಾತ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 7 ವರ್ಷಗಳಿಂದ ನೇಮಕಾತಿ ನಡೆದಿಲ್ಲ. ಸರ್ಕಾರ 9 ಸಾವಿರ ಹುದ್ದೆ ನೇಮಕಾತಿಗೆ ಅನುಮತಿ ನೀಡಿದೆ. ಆಯಾ ವಿಭಾಗೀಯ ಸಂಸ್ಥೆಗಳಿಗೆ ನೇಮಕಾತಿ ಜವಾಬ್ದಾರಿ ನೀಡಲಾಗಿದೆ. ನಗರದಲ್ಲಿ ಜಾಗೆ ನೀಡಿದರೆ ಟ್ರಕ್ ಟರ್ಮಿನಲ್ ಮಂಜೂರು ಮಾಡುತ್ತೇವೆ. ಮುಂಬರುವ ಬಜೆಟ್ ನಲ್ಲಿ ಈ ವಿಷಯ ಅಳವಡಿಸಲಾಗುವುದು. ಎಲ್ಲ ಜಿಲ್ಲೆಗಳಲ್ಲಿ ಚಾಲನೆ ಲೈಸೆನ್ಸ್ ನೀಡುವ ಕ್ಯಾಂಪ್ ಮಾಡಲು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ರಾಮಲಿಂಗ ರೆಡ್ಡಿ ಹೇಳಿದರು.

    ನಗದು ರಹಿತ ಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ, ನಗರದ ಹೊಸ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಪುಸ್ತಕ ವ್ಯವಸ್ಥೆ, ರೈಲ್ವೆ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಸೇರಿದಂತೆ ಅಗತ್ಯ ವಸ್ತುಗಳು ಇಲ್ಲೇ ಸಿಗುವಂತಾಗಬೇಕು. ವಿಮಾನ ನಿಲ್ದಾಣದಲ್ಲಿ ಸಿಗುವ ಎಲ್ಲ ವ್ಯವಸ್ಥೆ ಯಂತೆ ಬಸ್ ನಿಲ್ದಾಣದಲ್ಲಿ ಸಿಗುವಂತಾಗಬೇಕು. 25  ಲಕ್ಷ ರೂ. ವೆಚ್ಚ ಮಾಡಿದ್ದಲ್ಲಿ ಈ ನಿಲ್ದಾಣವು ಭವ್ಯವಾಗಲಿದೆ ಎಂದರು.

    ಸಾರಿಗೆ ಇಲಾಖೆಯಿಂದ ಗದಗ ನಗರಕ್ಕೆ ಕಡಿಮೆ ಕೆಲಸ ಆಗಿದೆ. ನಗರದಲ್ಲಿ ಟ್ರಕ್ ಟರ್ಮಿನಲ್ ಆಗಬೇಕಿತ್ತು. ಭೂಸ್ವಾಧಿನ ಪ್ರಕ್ರಿಯೆ ಹಲವು ಕಾರಣಗಳಿಂದ ನಿಂತಿದೆ. ಟ್ರಕ್ ಟರ್ಮಿನಲ್ ಅನ್ನು ಆದಷ್ಟು ಬೇಗ ಮಂಜೂರು ಮಾಡಬೇಕು ಎಂದು ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಸಚಿವ ಎಚ್.ಕೆ. ಪಾಟೀಲ ಮನವಿ ಮಾಡಿದರು. ಗದಗ ನಗರದಲ್ಲಿ ಕೆಲವಡೆ ಮಿನಿ ಬಸ್ ನಿಲ್ದಾಣಗಳನ್ನು ಮಂಜೂರು, ವಿಭಾಗೀಯ ಚಾಲಕ ತರಬೇತಿ ಕೇಂದ್ರ, ಅಶ್ವಮೇಧ ಬಸ್ ವ್ಯವಸ್ಥೆ, ಇನ್ನೂ ಹೆಚ್ಚಿನ ಬಸ್ ವ್ಯವಸ್ಥೆ ಮಂಜೂರು, ಲೈಸೆನ್ಸ್ ನೀಡುವ ಪ್ರಕ್ರಿಯೆ ಅತ್ಯಾಧುನಿಕರಣ ಸೇರಿದಂತೆ ಹಲವು ಮನವಿಗಳನ್ನು ಎಚ್.ಕೆ. ಪಾಟೀಲ ಮಾಡಿದರು.

    ವಾಕರಸಾಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್ ಮಾತನಾಡಿ, ಶಕ್ತಿ ಯೋಜನೆ ಯಶಸ್ವಿಯಾಗಿದೆ.ಹುಬ್ಬಳ್ಳಿ ವಿಭಾಗದ 6 ಜಿಲ್ಲೆಯಲ್ಲಿ 34 ಕೋಟಿ ಜನ ಸಂಚರಿಸಿದ್ದಾರೆ. ರಾಜ್ಯದಲ್ಲಿ ಹೊಸ ಬಸ್ ಖರೀದಿಗೆ ಸರ್ಕಾರ 500 ಕೋಟಿ ಮೀಸಲಿಟ್ಟಿದೆ. ಅದರಲ್ಲಿ ವಾಕರಸಾಸಂಸ್ಥೆಗೆ 150 ಕೋಟಿ ಕೊಟ್ಟಿದೆ. ಅದರಲ್ಲಿ ಮೊದಲ ಹಂತದ 20 ಕೋಟಿ ವೆಚ್ಚದಲ್ಲಿ 50 ಬಸ್ ಖರೀದಿಸಲಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆದಿದೆ. ಸರ್ಕಾರ 20 ಸಾವಿರ ಹುದ್ದೆಗಳನ್ನು ಬರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ. ಅಪಘಾತ ರಹಿತ ಸೇವೆ ನಮ್ಮ ಸಂಸ್ಥೆಯ ಉದ್ದೇಶ ಆಗಿದೆ. ಅಪಘಾತ ರಹಿತ ಸೇವೆ ಸಲ್ಲಿಸಿದ  48 ಜನರಿಗೆ ಇಂದು ಬೆಳ್ಳಿ ಪದಕ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

    ಮಾರ್ಚ ಅಂತ್ಯಕ್ಕೆ 5000 ನೂತನ ಬಸ್ ಪೂರೈಕೆ:ಸಚಿವ ರಾಮಲಿಂಗರೆಡ್ಡಿ

    ಕಾರ್ಯಕ್ರಮದಲ್ಲಿ ಅಪಘಾತ ರಹಿತ ಸೇವೆ ಸಲ್ಲಿಸಿದ 48 ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಲಾಯಿತು. ಮಾಜಿ ಶಾಸಕ ಡಿ.ಆರ್. ಪಾಟೀಲ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಬಿ.ಬಿ. ಅಸೂಟಿ, ಸಿದ್ದು ಪಾಟೀಲ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts