ನೇಪಾಳದಲ್ಲಿ 6.1 ತೀವ್ರತೆಯ ಭೂಕಂಪ; ಬಿಹಾರ, ಸಿಲುಗುರಿಯಲ್ಲು ಕಂಪಿಸಿದ ಭೂಮಿ

EarthQuake

ನವದೆಹಲಿ: ಶುಕ್ರವಾರ (ಫೆಬ್ರವರಿ 28) ಮುಂಜಾನೆ ನೇಪಾಳ ಹಾಗೂ ಭಾರತದಲ್ಲಿ 6.1 ತೀವ್ರತೆಯ (Earthquake) ಭೂಕಂಪ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಬಿಹಾರ, ಸಿಲುಗುರಿ, ಹಿಮಾಲಯನ್‌ನ ಮಧ್ಯಭಾಗದ ಸಿಂಧುಪಾಲ್‌ಚೌಕ್ ಜಿಲ್ಲೆಯಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ.ರಾಷ್ಟ್ರೀಯ ಭೂಕಂಪ ನಿರ್ವಹಣಾ ಮತ್ತು ಸಂಶೋಧನಾ ಕೇಂದ್ರ ಭೂಕಂಪದ ಕೇಂದ್ರವು ಸಿಂಧುಪಾಲ್‌ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಸ್ಥಳೀಯ ಕಾಲಮಾನ ಬೆಳಗಿನ ಜಾವ 2:51ಕ್ಕೆ ಸಂಭವಿಸಿರುವುದಾಗಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ನೇಪಾಳದ ಹಲವು ಪ್ರದೇಶಗಳಲ್ಲಿ ವಿಶೇಷವಾಗಿ ಪೂರ್ವ ಮತ್ತು ಮಧ್ಯ ಪ್ರದೇಶಗಳಲ್ಲಿ, ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ವರದಿ ಮಾಡಿದೆ. ಭಾರತ ಮತ್ತು ಟಿಬೆಟ್, ಚೀನಾದ ಗಡಿ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿದೆ.

ಕೆಲ ದಿನಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿ, ಪಶ್ಚಿಮ ಬಂಗಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು. ರಿಕ್ಟರ್ ಮಾಪನದಲ್ಲಿ ಶೇ. 04ರಷ್ಟು ದಾಖಲಾಗಿದ್ದು, ಭೂಕಂಪದ ವೇಳೆ ದೊಡ್ಡ ಶಬ್ದವೊಂದು ಕೇಳಿಸಿತು ಎಂದು ಸ್ಥಳೀಯರು ತಿಳಿಸಿದ್ದರು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

Champions Trophy| ಒಂದೇ ಕಡೆ ಆಡುತ್ತಿರುವುದರಿಂದ ಹೆಚ್ಚು ಅನುಕೂಲವಾಗುತ್ತಿದೆ; ಟೂರ್ನಿಯಿಂದ ಹೊರಬಿದ್ದ ಬಳಿಕ ಭಾರತದ ವಿರುದ್ಧ ಗಂಭೀರ ಆರೋಪದ ಮಾಡಿದ ಪಾಕ್ ಕೋಚ್​

ನಮ್ಮ ನಡುವೆ ಇದುವೇ… ಜಹೀರ್ ಇಕ್ಬಾಲ್ ಜತೆ ಮದುವೆ ಬಳಿಕ ಸೋನಾಕ್ಷಿಗೆ ಮತಾಂತರಗೊಳ್ಳಲು ಕೇಳಲಾಗಿತ್ತಾ? ಹೀಗಿದೆ ನಟಿ ನೀಡಿದ ಕಾರಣ

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…