ಆಂಧ್ರದಿಂದ ಗಾಂಜಾ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮಾರುತ್ತಿದ್ದರು; ಒಬ್ಬ ವಿದೇಶಿ ಪ್ರಜೆ ಸೇರಿ 6 ಜನರ ಬಂಧನ

ಬೆಂಗಳೂರು : ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ 6 ದುಷ್ಕರ್ಮಿಗಳನ್ನು ಬೆಂಗಳೂರು ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 15 ಲಕ್ಷ ರೂಪಾಯಿ ಬೆಲೆ ಬಾಳುವ 28 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇನ್ಸ್​ಪೆಕ್ಟರ್​ ಜಿ.ಲಕ್ಷ್ಮೀಕಾಂತಯ್ಯ ನೇತೃತ್ವದ ತಂಡವು ಜುಲೈ 7 ರಂದು ಹೆಚ್.ಎ.ಎಲ್. ಮತ್ತು ಕೆ.ಆರ್.ಪುರಂ ಪೊಲೀಸ್​ ಠಾಣೆ ವ್ಯಾಪ್ತಿಗಳಲ್ಲಿ ಡ್ರಗ್​ಪೆಡ್ಲರ್​ಗಳ ಎರಡು ಜಾಲಗಳ ಮೇಲೆ ಪ್ರತ್ಯೇಕ ದಾಳಿ ಕಾರ್ಯಾಚರಣೆ ನಡೆಸಿದರು. ಈ ದಾಳಿಯಲ್ಲಿ ಆಂಧ್ರದಿಂದ … Continue reading ಆಂಧ್ರದಿಂದ ಗಾಂಜಾ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮಾರುತ್ತಿದ್ದರು; ಒಬ್ಬ ವಿದೇಶಿ ಪ್ರಜೆ ಸೇರಿ 6 ಜನರ ಬಂಧನ