ನಾಳೆ ಆರು ತುಳು ಕೃತಿಗಳ ಬಿಡುಗಡೆ

blank

ಮಂಗಳೂರು: ತುಲುವೆರೆ ಕಲ ಸಂಘಟನೆ ವತಿಯಿಂದ ‘ತುಲುವೆರೆ ಕಲ ವರ್ಸೊಚ್ಚಯ’ ಅಂಗವಾಗಿ ಆರು ತುಳು ಕೃತಿಗಳ ಬಿಡುಗಡೆ ಮೇ 1ರಂದು ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದಲ್ಲಿ ನಡೆಯಲಿದೆ.

blank

ಸಂಘಟನೆ ಸದಸ್ಯರ ಕವನ, ಬರಹ ಸಂಗ್ರಹ ‘ಬೊಲ್ಲಿದಾರಗೆ’, ‘ಉದಿಪು’, ‘ಉಪ್ಪರಿಗೆ’, ‘ತುಡರ್’, ‘ಕೇಪುಲ’, ‘ಪುಂಡಿಕಾಣಿಕೆ’ ಕೃತಿಗಳನ್ನು ವಿಜಯಲಕ್ಷ್ಮೀ ಕಟೀಲ್, ಡಾ.ಮೀನಾಕ್ಷಿ ರಾಮಚಂದ್ರ, ರಾಜಶ್ರೀ ಟಿ.ರೈ ಪೆರ್ಲ, ವೀಣಾ ಟಿ.ಶೆಟ್ಟಿ, ರಘು ಇಡ್ಕಿದು, ಅಕ್ಷಯಾ ಆರ್.ಶೆಟ್ಟಿ ಬಿಡುಗಡೆಗೊಳಿಸಲಿದ್ದಾರೆ. ಶಾರದಾ ವಿದ್ಯಾಲಯ ಪ್ರಾಂಶುಪಾಲ ದಯಾನಂದ ಕಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತುಲುವೆರೆ ಕಲ ಅಧ್ಯಕ್ಷೆ ಗೀತಾ ಲಕ್ಷ್ಮೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕದ್ರಿ ನವನೀತ ಶೆಟ್ಟಿ ಸಂಘಟನೆ ಯೂಟ್ಯೂಬ್ ಚಾನೆಲ್ ಲೋಕಾರ್ಪಣೆಗೊಳಿಸಲಿದ್ದಾರೆ. ಕಾ.ವೀ ಕೃಷ್ಣದಾಸ್ ಮತ್ತಿತರರು ಭಾಗವಹಿಸಲಿದ್ದಾರೆ.

‘ತುಳು ಸಾಹಿತ್ಯದ ಬುಲೆಚ್ಚಿಲ್‌ದ ತಾದಿ ಆನಿ-ಇನಿ-ನನ’ ವಿಚಾರ ಕುರಿತು ಸಾಹಿತಿ ಮುದ್ದು ಮೂಡುಬೆಳ್ಳೆ ಮಾತನಾಡಲಿದ್ದಾರೆ. ಹರಿಣಿ ಎಂ.ಶೆಟ್ಟಿ, ದಿವ್ಯಾ ಅಂಚನ್ ಪಕ್ಷಿಕೆರೆ, ಪದ್ಮನಾಭ ಪೂಜಾರಿ ನೇರಂಬೋಳು ಅವರಿಗೆ ‘ಕಲತ ಬೊಲ್ಲಿ’ ಪುರಸ್ಕಾರ ಪ್ರದಾನಿಸಲಾಗುವುದು.

40 ಕವಿಗಳಿಂದ ಅಮೃತ ತುಲು ಚಿಟ್ಕಾ ಕಬಿಕೂಟ, ಪದರಂಗಿತ ಮಿನದನ ಹಾಗೂ ಚಾತುರ್ಪು ತೂಪರಿಕೆ ನಡೆಯಲಿದೆ. ಸದಾನಂದ ನಾರಾವಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank