ತಿಮ್ಮಪ್ಪನ ಸನ್ನಿಧಿಯ ಅಲಿಪಿರಿ ಮೆಟ್ಟಿಲು ಮಾರ್ಗದಲ್ಲಿ ಬಾಲಕಿಯನ್ನು ಎಳೆದೊಯ್ದು ಕೊಂದು ತಿಂದ ಚಿರತೆ!

ತಿರುಪತಿ: ತಿರುಮಲದಲ್ಲಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳುವ ಅಲಿಪಿರಿ ಮೆಟ್ಟಿಲು ಮಾರ್ಗದಲ್ಲಿ ಚಿರತೆಯೊಂದು ಆರು ವರ್ಷದ ಬಾಲಕಿಯನ್ನು ಎಳೆದೊಯ್ದು ಕೊಂದು ತಿಂದಿರುವ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ. ಮೃತ ಬಾಲಕಿಯನ್ನು ಲಕ್ಷಿತಾ ಎಂದು ಗುರುತಿಸಲಾಗಿದೆ. ಈಕೆ ನೆಲ್ಲರೂ ಜಿಲ್ಲೆಯ ಕೊವ್ವೂರು ಮಂಡಲದ ಪೊಥಿರೆಡ್ಡಿಪಾಳಂ ಗ್ರಾಮದ ನಿವಾಸಿ. ಕುಟುಂಬದೊಂದಿಗೆ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಹೋಗುವಾಗ ಈ ದುರಂತ ಸಂಭವಿಸಿದೆ. ತಿರುಮಲಕ್ಕೆ ಹೋಗುವ ಮೆಟ್ಟಿಲು ಮಾರ್ಗದಲ್ಲಿ ಚಿರತೆ ದಾಳಿಗೆ ಸಾವು ಸಂಭವಿಸಿದ ಮೊದಲ ಪ್ರಕರಣ ಇದಾಗಿದೆ. ಇದನ್ನೂ ಓದಿ: ಮದ್ವೆಗೂ ಮುನ್ನ … Continue reading ತಿಮ್ಮಪ್ಪನ ಸನ್ನಿಧಿಯ ಅಲಿಪಿರಿ ಮೆಟ್ಟಿಲು ಮಾರ್ಗದಲ್ಲಿ ಬಾಲಕಿಯನ್ನು ಎಳೆದೊಯ್ದು ಕೊಂದು ತಿಂದ ಚಿರತೆ!