ನವದೆಹಲಿ: ಭಾರತ್ ಜೋಡೋ ಯಾತ್ರೆ’ ಮಧ್ಯಪ್ರದೇಶವನ್ನು ಪ್ರವೇಶಿಸುವ ಮುನ್ನರಾಹುಲ್ ಗಾಂಧಿಗೆ ಪತ್ರ ಬರೆಯುವ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ 60 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.
ರಾಹುಲ್ ಗಾಂಧಿಗೆ ‘ಭಾರತ್ ಜೋಡೋ ಯಾತ್ರೆ’ ಇಂದೋರ್ ಪ್ರವೇಶಿಸುತ್ತಿದ್ದಂತೆ ಮುನ್ನರಾಹುಲ್ ಮೇಲೆ ಬಾಂಬ್ ಹಾಕುವುದಾಗಿ ಪತ್ರವನ್ನು ರವಾನಿಸಿ ಬೆದರಿಕೆವೊಡ್ಡಿದ್ದ. ಈ ಬೆದರಿಕೆ ಪತ್ರವೂ ಇಂದೂರ್ ನಗರದ ಸಿಹಿತಿಂಡಿ ಅಂಗಡಿಯ ಮುಂದೆ ಪತ್ತೆಯಾಗಿತ್ತು. ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದರು.
ಇದನ್ನೂ ಓದಿ: ಬದನೆಕಾಯಿ ಬೆಳೆಯಲು ಇನ್ಫೋಸಿಸ್ ಉದ್ಯೋಗ ತೊರೆದು ರೈತನಾದ ಟೆಕ್ಕಿ; 40,000 ಸಾವಿರ ರೂ. ಸಂಬಳಕ್ಕಿಂತ ದುಪ್ಪಟ್ಟು ಹಣ ಗಳಿಕೆ!
ರಾಹುಲ್ ಗಾಂಧಿಗೆ ಪತ್ರ ಬರೆಯುವ ಮೂಲಕ ಬೆದರಿಕೆ ಹಾಕಿದ ಆರೋಪದ ಮೇಲೆ 60 ವರ್ಷದ ದಯಾ ಸಿಂಗ್ ಅಲಿಯಾಸ್ ಐಶಿಲಾಲ್ ಜಾಮ್ ಎಂಬಾತನು ರೈಲಿನಿಂದ ಓಡಿಹೋಗಲು ಯತ್ನಿಸುತ್ತಿದ್ದಾಗ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ.
ಇದನ್ನೂ ಓದಿ: 6 ಪತ್ನಿಯರ ಜತೆ ಮಲಗಲು ಹಾಸಿಗೆಗಾಗಿ 81 ಲಕ್ಷ ರೂ. ಖರ್ಚು ಮಾಡಿದ ಭೂಪ!
ಪೊಲೀಸ್ ಆಯುಕ್ತ ನಿಮಿಶ್ ಅಗರ್ವಾಲ್ ಮಾತನಾಡಿ, ‘ಆರೋಪಿ ಐಶಿಲಾಲ್ ಝಮ್ ರಾಹುಲ್ ಗಾಂಧಿಗೆ ಬೆದರಿಕೆ ಪತ್ರವನ್ನು ಏಕೆ ಕಳುಹಿಸಿದ್ದಾನೆ ಎಂಬುದರ ಬಗ್ಗೆ ಸ್ಪಷ್ಟತೆ ತಿಳಿದು ಬಂದಿಲ್ಲ . ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.