ನವದೆಹಲಿ: ಕಳೆದೆರಡು ದಿನಗಳಲ್ಲಿ 14 ರಾಜ್ಯಗಳಲ್ಲಿ ಒಟ್ಟು 647 ಕೋವಿಡ್ 19 ಪ್ರಕರಣಗಳು ದೃಢಪಟ್ಟಿದೆ. ಇದಕ್ಕೆ ನವದೆಹಲಿಯ ನಿಜಾಮುದ್ದೀನ್ನಲ್ಲಿ ಆಯೋಜನೆಗೊಂಡಿದ್ದ ತಬ್ಲಿಘಿ ಜಮಾತ್ ಸಭೆ ಕಾರಣ ಎಂಬುದು ಸ್ಪಷ್ಟವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಈ ವಿಷಯ ತಿಳಿಸಿದ್ದಾರೆ. ತಬ್ಲಿಘಿ ಜಮಾತ್ ಸಭೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ 12 ಜನರು ಕಳೆದ 24 ಗಂಟೆಗಳಲ್ಲಿ ಮೃತಪಟ್ಟಿರುವುದಾಗಿಯೂ ಹೇಳಿದ್ದಾರೆ.
ಭಾರತದಲ್ಲಿ ಇದುವರೆಗೆ 2,301 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, 56 ಮಂದಿ ಮೃತಪಟ್ಟಿದ್ದಾರೆ. ಗುರುವಾರದಿಂದ ಶುಕ್ರವಾರದ ನಡುವೆ 12 ಮಂದಿ ಸತ್ತಿದ್ದಾರೆ. ಗುರುವಾರದಿಂದೀಚೆಗೆ ಹೊಸದಾಗಿ 336 ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 157 ಜನರು ಕರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಹೆಚ್ಚಾಗುತ್ತಿರುವ ಸೋಂಕಿನ ಪ್ರಕರಣಗಳನ್ನು ಗಮನಿಸಿದಾಗ, ನಿರ್ದಿಷ್ಟವಾದ ಕಾರಣ ಇರುವಂತೆ ತೋರುತ್ತಿದೆ ಎಂದು ಪರೋಕ್ಷವಾಗಿ ತಬ್ಲಿಘಿ ಜಮಾತ್ ಸಭೆಯನ್ನು ಉಲ್ಲೇಖಿಸಿದರು.
ದೇಶದಲ್ಲಿ ಲಾಕ್ಡೌನ್ ಘೋಷಿಸಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಜಾರಿಗೊಳಿಸಿರುವುದರಿಂದ ಸೋಂಕು ಹರಡುವಿಕೆ ಪ್ರಮಾಣ ತುಂಬಾ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
ನರ್ಸ್ಗಳ ಜತೆ ಅಸಭ್ಯವಾಗಿ ವರ್ತಿಸಿದ್ದ ತಬ್ಲಿಘಿ ಜಮಾತ್ನ 6 ಸದಸ್ಯರು ಬೇರೆ ಆಸ್ಪತ್ರೆಗೆ ಶಿಫ್ಟ್, ದೂರು ದಾಖಲು