More

    ‘ಬಸವ ಪುರಸ್ಕಾರ’ಕ್ಕೆ ಕೃತಿಗಳ ಆಹ್ವಾನ

    ಬೆಂಗಳೂರು: ಕಲಬುರಗಿ ಜಿಲ್ಲೆಯ ಪಾಳಾದ ಶ್ರೀ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ 6ನೇ ವರ್ಷದ ರಾಜ್ಯಮಟ್ಟದ ‘ಬಸವ ಪುರಸ್ಕಾರ’ಕ್ಕೆ 2023ರಲ್ಲಿ ಪ್ರಕಟವಾದ ವಿವಿಧ ಪ್ರಕಾರಗಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಬೆಳ್ಳಿ ಪದಕ, ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

    ಕಥೆ, ಕವನ, ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಪ್ರವಾಸ ಕಥನ, ವಚನ, ಮಕ್ಕಳ ಕಥೆ, ಚುಟುಕು, ಗಜಲ್ ಸೇರಿ ವಿವಿಧ ಸಾಹಿತ್ಯ ಕೃತಿಗಳ ಎರಡು ಪ್ರತಿಗಳನ್ನು ಮಾ. 30ರೊಳಗೆ ಕಳುಹಿಸಬೇಕು. ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಎಂ.ಫಿಲ್ ಅಥವಾ ಪಿಎಚ್.ಡಿ ಪ್ರಬಂಧಗಳು ಹಾಗೂ ಸಂಪಾದನೆ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ.

    ವಿಳಾಸ: ಶ್ರೀ ಶರಣಗೌಡ ಪಾಟೀಲ ಪಾಳಾ ಅಧ್ಯಕ್ಷರು, ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್, ಶಿವಶರಣ ಸಂಕೀರ್ಣ ಅಪಾರ್ಟ್‌ಮೆಂಟ್, 3ನೇ ಮಹಡಿ, ಬಿ-1, ಖೂಬಾ ಪ್ಲಾಟ್ ಕೋರ್ಟ್ ರಸ್ತೆ, ಕಲಬುರಗಿ – 585102. ವಿವರಗಳಿಗೆ ಮೊ: 97315 55117 ಅಥವಾ 97314 87903 ಸಂಪರ್ಕಿಸಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts