More

    ಭೀಕರ ರಸ್ತೆ ಅಪಘಾತ: ಆರು ಮಂದಿ ದುರ್ಮರಣ, 13 ಜನರಿಗೆ ಗಾಯ

    ನಾಗುರ್​: ಭೀಕರ ಅಪಘಾತವೊಂದರಲ್ಲಿ ಆರು ಜನ ಮೃತಪಟ್ಟು, 13 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಲಾನಾ ಜಿಲ್ಲೆಯ ಪುಣೆ-ನಾಗುರ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಬಸ್ ಪ್ರಯಾಣಿಕರು ಮತ್ತು ಎರಡೂ ವಾಹನಗಳ ಚಾಲಕರು ಸೇರಿದ್ದಾರೆ.

    ಇದನ್ನೂ ಓದಿ: ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಶಿವಣ್ಣ ಬೇಸರ: ಸಮಾಧಾನಿಸಲು ಭೇಟಿ ನೀಡಿದರೇ ಸುರ್ಜೆವಾಲಾ?

    ಇಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಟ್ರಕ್ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಪುಣೆಯ ಮೆಹೆಕರ್‌ನಿಂದ ಬರುತ್ತಿದ್ದ ಬಸ್​ ಎದುರಿನಿಂದ ಬಂದ ಟ್ರಕ್‌ಗೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ತೀವ್ರ ಹಾನಿಯಾಗಿದೆ.

    ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ವಾಹನಗಳ ಜಖಂಗೊಂಡ ಅವಶೇಷಗಳ ಮೂಲಕ ಬದುಕುಳಿದವರನ್ನು ಹೊರತೆಗೆಯಲಾಗುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಿಂಧಖೇಡರಾಜ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts