More

    ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ

    ಮುಂಡರಗಿ: ಸಂಕ್ರಾಂತಿ ನಿಮಿತ್ತ ಸಾವಿರಾರು ಜನರು ತಾಲೂಕಿನ ಸುಕ್ಷೇತ್ರ ಶಿಂಗಟಾಲೂರ ಶ್ರೀ ವೀರಭದ್ರೇಶ್ವರ ದೇವಸ್ಥಾನ ಬಳಿಯ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದರು.

    ಗದಗ ಜಿಲ್ಲೆ ಸೇರಿ ಕೊಪ್ಪಳ, ಬಳ್ಳಾರಿ, ದಾವಣಗೇರಿ, ಹಾವೇರಿ, ಇತರ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ದೇವಸ್ಥಾನದ ಮುಂಭಾಗದ ಪವಿತ್ರ ವನದಲ್ಲಿ ಕುಳಿತು ಭೋಜನ ಸವಿದರು.

    ವಿವಿಧ ಭಾಗಗಳಿಂದ ಆಗಮಿಸುವ ಜನರ ಅನುಕೂಲಕ್ಕಾಗಿ ಹೂವಿನಹಡಗಲಿ ಹಾಗೂ ಮುಂಡರಗಿ ಬಸ್ ಡಿಪೊಗಳಿಂದ ವಿಶೇಷ ಬಸ್ ಸೇವೆ ಒದಗಿಸಲಾಗಿತ್ತು. ದೇವಸ್ಥಾನಕ್ಕೆ ಬಂದಂತಹ ಭಕ್ತರಿಗೆ ಮತ್ತು ಯಾತ್ರಾರ್ಥಿಗಳಿಗೆ ವೀರಭದ್ರೇಶ್ವರ ದೇವಸ್ಥಾನ ಸಮಿತಿ ಉಚಿತ ಪ್ರಸಾದ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಿದ್ದರು.

    ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿರುವ ಸಿಂಗಟಾಲೂರ ಏತ ನೀರಾವರಿ ಬ್ಯಾರೇಜ್ ಮುಂಭಾಗದಲ್ಲಿ ನೂರಾರು ಜನರು ಮಕರ ಸಂಕ್ರಮಣ ಆಚರಿಸಿದರು. ತಾಲೂಕಿನ ಕೊರ್ಲಹಳ್ಳಿ ಬಳಿಯ ಮದಲಗಟ್ಟ ಆಂಜನೇಯ ದೇವಸ್ಥಾನ ಮುಂಭಾಗದ ತುಂಗಭದ್ರಾ ನದಿಯಲ್ಲಿಯೂ ಅನೇಕರು ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದರು.

    ಹಬ್ಬದ ಅಂಗವಾಗಿ ಜನತೆ ವಿವಿಧ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಂಡರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts