More

    ‘777 ಚಾರ್ಲಿ’ ಸಿನಿಮಾಗೆ ಭರ್ಜರಿ ಗಿಫ್ಟ್ ನೀಡಿದ ಶ್ವಾನಪ್ರಿಯ ಸಿಎಂ ಬೊಮ್ಮಾಯಿ

    ಬೆಂಗಳೂರು: 777 ಚಾರ್ಲಿ ಸಿನಿಮಾಗೆ ಬೊಮ್ಮಾಯಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಸಿನಿಮಾ ಮೇಲಿನ ತೆರಿಗೆ (ಎಸ್‌ಜಿಎಸ್‌ಟಿ) ಮೊತ್ತವನ್ನು ಪ್ರದರ್ಶಕರಿಗೆ ಹಿಂಪಾವತಿ ಮಾಡುವ ಮೂಲಕ ಚಲನಚಿತ್ರ ವೀಕ್ಷಕರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.

    ಆ ಮೂಲಕ ಶ್ವಾನಪ್ರಿಯ ಸಿಎಂ ಬೊಮ್ಮಾಯಿ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿದ್ದಾರೆ. ಆ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಕರ್ನಾಟಕ ರಾಜ್ಯಾದ್ಯಂತ ಚಿತ್ರ ಮಂದಿರಗಳು, ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರದರ್ಶನಗೊಳ್ಳುತ್ತಿರುವ ಚಾರ್ಲಿ ಸಿನಿಮಾಕ್ಕೆ ಜೂನ್ 19 ರಿಂದ ಆರು ತಿಂಗಳ ಅವಧಿಗೆ ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್‌ಜಿಎಸ್‌ಟಿ) ಹಿಂಪಾವತಿ ಸೌಲಭ್ಯ ನೀಡಲು ನಿರ್ಧರಿಸಿದೆ.

    ನಟ ರಕ್ಷಿತ್ ಶೆಟ್ಟಿ ಜೂನ್ 14ರಂದು ಸಿಎಂಗೆ ಪತ್ರ ಬರೆದು, 777 ಚಾರ್ಲಿ ಗೆ ಶೇ.100ರಷ್ಟು ತೆರಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದರು. ಮನವಿ ಪತ್ರದಲ್ಲಿ ಇನ್‌ಬ್ರೀಡಿಂಗ್‌ನಿಂದಾಗಿ ಶ್ವಾನಗಳ ಸ್ವಾಸ್ಥ್ಯದ ಮೇಲಾಗುವ ಪರಿಣಾಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಪ್ರಾಣಿ ಹಿಂಸೆಯ ಸೂಕ್ಷ್ಮತೆಗಳನ್ನು ಎತ್ತಿಹಿಡಿಯುವ ಆಶಯ ಈ ಚಿತ್ರದ ಕಥಾಹಂದರದಲ್ಲಿ ಒಳಗೊಂಡಿದ್ದು, ಇದರ ಜತೆಗೆ ಈ ಚಿತ್ರವು ಬೀದಿ ನಾಯಿಗಳನ್ನು ದತ್ತು ಪಡೆಯುವುದರ ಬಗ್ಗೆ ಸಂದೇಶವನ್ನು ಸಾರುತ್ತದೆ ಎಂದು ವಿವರಿಸಿದ್ದರು.

    ನಟ ಸತೀಶ್ ವಜ್ರ ಹತ್ಯೆ ಪ್ರಕರಣ; ಬಾವನಿಗೆ ಸ್ಕೆಚ್ ಹಾಕಿದ ಬಾಮೈದ ಅಂದರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts