More

    ಜಾಮೀನು ಸೇರಿ ತುರ್ತು ಪ್ರಕರಣಗಳ ಪರಿಗಣನೆ
    *ಜಿಲ್ಲಾ ನ್ಯಾಯಾಧೀಶ ಕೃಷ್ಣರಾಜ ಅಸೋಡೆ ಹೇಳಿಕೆ

    ಬಳ್ಳಾರಿ:
    ಜಾಮೀನು ಸೇರಿದಂತೆ ತುರ್ತು ಪ್ರಕರಣಗಳನ್ನು ಮಾತ್ರ  ಕೈಗೊಳ್ಳಲಾಗುತ್ತಿದೆ. ಬಾಕಿ ಪ್ರಕರಣಗಳಿಗೆ ದಿನಾಂಕ ನಿಗದಿಪಡಿಸಲಾಗುತ್ತಿದೆ. ಕಕ್ಷಿದಾರರು ನ್ಯಾಯಾಲಯಕ್ಕೆ ಗೈರಾದರೆ ಪ್ರಕರಣಕ್ಕೆ ಯಾವುದೇ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶ ಕೃಷ್ಣರಾಜ ಅಸೋಡೆ ತಿಳಿಸಿದರು.
    ಕರೊನಾ ತಡೆಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ  ಸೂಚನೆಯಂತೆ ಜಾಗೃತಿ ಮೂಡಿಸಲಾಗುತ್ತಿದೆ. ಮಹಾನಗರ ಪಾಲಿಕೆಯಿಂದ ನಗರದಲ್ಲಿ ಎಲ್ಲ ಕಡೆ ಔಷಧಿ ಸಿಂಪಡಿಸಬೇಕೆಂದು ಸೂಚಿಸಿದ್ದೇವೆ. ಆರೋಗ್ಯ ಇಲಾಖೆಯವರು ಕಕ್ಷಿದಾರರಿಗೆ ಅಗತ್ಯ ಮಾಹಿತಿ ನೀಡುವುದರ ಜತೆಗೆ ಥರ್ಮಲ್ ಪರೀಕ್ಷೆ, ಮಾಸ್ಕ್, ಸ್ಯಾನಿಟೈಸರ್ ಒದಗಿಸಿದ್ದಾರೆ. ನ್ಯಾಯಾಲಯದ ಆವರಣ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ಸೋಮವಾರ ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಜೈಲಿನಲ್ಲಿರುವ ಕೈದಿಗಳ ಬಗ್ಗೆ ಮುಂಜಾಗ್ರತಾ ಕ್ರಮ  ಕೈಗೊಳ್ಳುವಂತೆ ಸೂಚಿಸಲಾಗಿದೆ. ಅದಕ್ಕೆ ಪೂರಕವಾಗಿ ಬಂದಿಖಾನೆ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಕೈದಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿದೆ ಎಂದು ನ್ಯಾಯಾಧೀಶ ಕೃಷ್ಣರಾಜ ಅಸೋಡೆ ಹೇಳಿದರು.
    ನ್ಯಾಯಾಧೀಶರಾದ ಖಾಸಿಂ ಚೂರಿ ಖಾನ್ ಮಾತನಾಡಿ,  ತುರ್ತು ಪ್ರಕರಣಗಳನ್ನು ಹೊರತುಪಡಿಸಿ ಇತರ ವಕೀಲರು ಹಾಗೂ ಕಕ್ಷಿದಾದರರನ್ನು ನ್ಯಾಯಾಲಯದ ಒಳಗೆ ಬಿಡುತ್ತಿಲ್ಲ. ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರೂ ತಾತ್ಕಾಲಿಕವಾಗಿ ವಾರೆಂಟ್ ಜಾರಿ ಮಾಡುತ್ತಿಲ್ಲ ಎಂದು ಹೇಳಿದರು. ನ್ಯಾಯಾಧೀಶ ಅರ್ಜುನ ಮಲ್ಲೂರು, ವಕೀಲರ ಸಂಘದ ಅಧ್ಯಕ್ಷ ಎಚ್.ಎಂ.ಅಂಕಲಯ್ಯ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts