ನೈನಿತಾಲ್: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್ ವಾಹನವೊಂದು ಚಾಲಜನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡ್ನ ನೈನಿತಾಲ್ ಜಿಲ್ಲೆಯ ಚೆಡಾಖಾನ್-ಮಿದರ್ ರಸ್ತೆಯಲ್ಲಿ ನಡೆದಿದೆ.
ಪಟ್ಲೋಟ್ನಿಂದ ಅಮ್ಜದ್ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
#Uttarakhand: Eight people killed, one injured as vehicle falls into gorge on Cheerakan-Meedar motor road in #Nainital.
— All India Radio News (@airnewsalerts) November 17, 2023
Chief Minister @pushkardhami expresses deep grief over the incident. pic.twitter.com/RLWuyufia9
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ ಘಟನೆ ಶುಕ್ರವಾರ ಸಂಭವಿಸಿದ್ದು, ಎದುರು ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆಯಲು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಕಮರಿಗೆ ಉರುಳಿದೆ. ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ ತಿಳಿಸಿದ್ದಾರೆ.
ದುರ್ಘಟನೆ ಕುರಿತು ಸಂತಾಪ ಸೂಚಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳನ್ನು ಓಖಲಕಂಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
छेडाखान मीडार मोटर मार्ग, नैनीताल में वाहन के दुर्घटनाग्रस्त होने से 8 लोगों के हताहत होने का अत्यंत दुःखद समाचार प्राप्त हुआ।
— Pushkar Singh Dhami (@pushkardhami) November 17, 2023
ईश्वर दिवंगतों की आत्मा को शांति एवं शोकाकुल परिजनों को यह असीम कष्ट सहन करने की शक्ति प्रदान करें।
बाबा केदार से घायलों के शीघ्र स्वास्थ्य लाभ की…