More

    ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ; ಎಂಟು ಮಂದಿ ಸಾವು, ಹಲವರು ನಾಪತ್ತೆ

    ನವದೆಹಲಿ: ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ ಸಂಭವಿಸಿದ ಪರಿಣಾಮ ಎಂಟು ಮಂದಿ ಮೃತಪಟ್ಟು, ಹಲವರು ನಾಪತ್ತೆಯಾಗಿರುವ ಘಟನೆ ಚೀನಾದ ಹೆನಾನ್ ಪ್ರಾಂತ್ಯದ ಪಿಂಗ್‌ಡಿಂಗ್‌ಶಾನ್‌ ನಗರದಲ್ಲಿ ನಡೆದಿದೆ.

    ಅವಶೇಷಗಳಡಿ ಸಿಲುಕಿದ್ದ ಹಲವರನ್ನು ಸುರಕ್ಷೊತವಾಗಿ ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಅಬಕಾರಿ ನೀತಿ ಹಗರಣ; ನಾಲ್ಕನೇ ಬಾರಿ ಅರವಿಂದ್​ ಕೇಜ್ರಿವಾಲ್​ಗೆ ಸಮನ್ಸ್​ ಜಾರಿ ಮಾಡಿದ ED

    ಈ ಕುರಿತು ಪ್ರತಿಕ್ರಿಯಿಸಿರುವ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಪಿಂಗ್‌ಡಿಂಗ್‌ಶಾನ್‌ ಟಿಯಾನನ್‌ ಕಲ್ಲಿದ್ದಲು ಗಣಿ ಕಂಪನಿ, ಲಿಮಿಟೆಡ್ (‌‌PTCMC., Ltd)ಯ ಗಣಿಯಲ್ಲಿ ಶುಕ್ರವಾರ ಮಧ್ಯಾಹ್ನ 2:55ಕ್ಕೆ ಘಟನೆ ನಡೆದಿದೆ. ಘಟನೆ ನಡೆದ ವೇಳೆ 400ಕ್ಕೂ ಅಧಿಕ ಮಂದಿ ಸ್ಥಳದಲ್ಲಿದ್ದರು ಎಂದು ತಿಳಿದು ಬಂದಿದೆ.

    ಅವಶೇಷಗಳಡಿ ಸಿಲುಕಿದ್ದ 380 ಮಂದಿಯನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಉಳಿದ 45 ಮಂದಿ ನಾಪತ್ತೆಯಾಗಿದ್ದಾರೆ. 8 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts