ಶ್ರೀನಗರ: ಇಲ್ಲಿನ ಬಂಡಿಪೊರಾ ಜಿಲ್ಲೆಯ ಬಿಜೆಪಿ ಮುಖಂಡ ಶೇಖ್ ವಾಸಿಂ ಬಾರಿ ಹಾಗೂ ಅವರ ಸಹೋದರ, ತಂದೆಯನ್ನು ನಿನ್ನೆ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಶೇಖ್ ವಾಸಿಂ ಅವರು ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರೂ ಹೌದು. ಪ್ರಕರಣತ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಇಂದು ಶೇಖ್ ವಾಸಿಂ ಅವರ ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಶೇಖ್ ವಾಸಿಂ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಎಂಟು ಮಂದಿ ಸೆಕ್ಯೂರಿಟಿ ಗಾರ್ಡ್ಗಳನ್ನು ಬಂಧಿಸಿರುವ ಪೊಲೀಸರು ಅವರನ್ನೆಲ್ಲ ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಡಿಪೊರಾ ಪಟ್ಟಣದ ಮುಸ್ಲಿಮಾಬಾದ್ನಲ್ಲಿರುವ ಅಂಗಡಿ ನಡೆಸುತ್ತಿದ್ದ ಶೇಖ್ ವಾಸಿಂ, ಅವರ ತಂದೆ ಮತ್ತು ಸಹೋದರನನ್ನು ಅದೇ ಅಂಗಡಿಯಲ್ಲಿ ಉಗ್ರರು ಗುಂಡು ಹಾರಿಸಿ ಕೊಂದಿದ್ದರು. ಶೇಖ್ ವಾಸಿಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅವರ ತಂದೆ ಮತ್ತು ಸಹೋದರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. (ಏಜೆನ್ಸೀಸ್)