ಲಖನೌ: ಕಾನ್ಪುರ ಸಮೀಪದ ಗ್ರಾಮವೊಂದರಲ್ಲಿ ಕ್ರಿಮಿನಲ್ಗಳು ಮತ್ತು ಪೊಲೀಸರ ನಡುವೆ ನಡೆದ ಎನ್ಕೌಂಟರ್ನಲ್ಲಿ ಡಿವೈಎಸ್ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರ ಸಮೀಪದ ಡಿಕ್ರು ಗ್ರಾಮದಲ್ಲಿ ವಿಕಾಸ್ ದುಬೆ ಎಂಬ ಕ್ರಿಮಿನಲ್ ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ತಂಡ ಆತನ ಬಂಧನಕ್ಕೆ ಬಲೆ ಬೀಸಿತ್ತು. ವಿಕಾಸ್ ದುಬೆ 60 ಅಪರಾಧ ಪ್ರಕರಣಗಳಲ್ಲಿ ಬೇಕಾದವನಾಗಿದ್ದ. ನಿನ್ನೆ ತಡ ರಾತ್ರಿ ಈ ಕಾರ್ಯಾಚರಣೆ ಆರಂಭವಾಗಿದ್ದು, ಇಂದು ನಸುಕಿನ ವೇಳೆ ವಿಕಾಸ್ ದುಬೆಯ ಅಡಗುದಾಣದ ರೂಫ್ ಟಾಪ್ನಿಂದ ಗುಂಡಿನ ದಾಳಿ ನಡೆಯಿತು.
ಇದನ್ನೂ ಓದಿ: ಒಂದು ರೂ.ಗೂ ಕಡಿಮೆ ಬೆಲೆಯ ಮಾತ್ರೆ ಕರೊನಾ ಚಿಕಿತ್ಸೆಯಲ್ಲಿ ಅದ್ಭುತಗಳನ್ನೇ ಮಾಡುತ್ತಿದೆ….!
ಪೊಲೀಸರ ಆಗಮನದ ಸುಳಿವು ಸಿಕ್ಕ ಕಾರಣ ದುಬೆ ಬೆಂಬಲಿಗರು ಈ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಗೆ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಎಸ್ಐಗಳು ಮತ್ತು ನಾಲ್ವರು ಕಾನ್ಸ್ಟೆಬಲ್ಗಳು ಹುತಾತ್ಮರಾದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. (ಏಜೆನ್ಸೀಸ್)