More

    ಕಾನ್ಪುರದಲ್ಲಿ ಡಿವೈಎಸ್​ಪಿ ಸೇರಿ 8 ಪೊಲೀಸರು ಹುತಾತ್ಮ

    ಲಖನೌ: ಕಾನ್ಪುರ ಸಮೀಪದ ಗ್ರಾಮವೊಂದರಲ್ಲಿ ಕ್ರಿಮಿನಲ್​ಗಳು ಮತ್ತು ಪೊಲೀಸರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಾನ್ಪುರ ಸಮೀಪದ ಡಿಕ್ರು ಗ್ರಾಮದಲ್ಲಿ ವಿಕಾಸ್ ದುಬೆ ಎಂಬ ಕ್ರಿಮಿನಲ್ ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ತಂಡ ಆತನ ಬಂಧನಕ್ಕೆ ಬಲೆ ಬೀಸಿತ್ತು. ವಿಕಾಸ್ ದುಬೆ 60 ಅಪರಾಧ ಪ್ರಕರಣಗಳಲ್ಲಿ ಬೇಕಾದವನಾಗಿದ್ದ. ನಿನ್ನೆ ತಡ ರಾತ್ರಿ ಈ ಕಾರ್ಯಾಚರಣೆ ಆರಂಭವಾಗಿದ್ದು, ಇಂದು ನಸುಕಿನ ವೇಳೆ ವಿಕಾಸ್​ ದುಬೆಯ ಅಡಗುದಾಣದ ರೂಫ್​ ಟಾಪ್​ನಿಂದ ಗುಂಡಿನ ದಾಳಿ ನಡೆಯಿತು.

    ಇದನ್ನೂ ಓದಿ: ಒಂದು ರೂ.ಗೂ ಕಡಿಮೆ ಬೆಲೆಯ ಮಾತ್ರೆ ಕರೊನಾ ಚಿಕಿತ್ಸೆಯಲ್ಲಿ ಅದ್ಭುತಗಳನ್ನೇ ಮಾಡುತ್ತಿದೆ….! 

    ಪೊಲೀಸರ ಆಗಮನದ ಸುಳಿವು ಸಿಕ್ಕ ಕಾರಣ ದುಬೆ ಬೆಂಬಲಿಗರು ಈ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಗೆ ಡಿವೈಎಸ್​ಪಿ ದೇವೇಂದ್ರ ಮಿಶ್ರಾ, ಮೂವರು ಎಸ್​ಐಗಳು ಮತ್ತು ನಾಲ್ವರು ಕಾನ್​ಸ್ಟೆಬಲ್​ಗಳು ಹುತಾತ್ಮರಾದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. (ಏಜೆನ್ಸೀಸ್)

    ಹಿಂದಿಗೆ ಸೇಲ್ ಆಯ್ತು ಶಿವಾಜಿ ಸುರತ್ಕಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts