More

    ಅಂಬಿಗರ ಚೌಡಯ್ಯನ ಆದರ್ಶ ಪಾಲಿಸಿ

    ಚನ್ನರಾಯಪಟ್ಟಣ: ಅಂಬಿಗರ ಚೌಡಯ್ಯ ಅವರ ವಚನಗಳು ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

    ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಗಂಗಾ ಮತಸ್ಥರ ಸಂಘದ ವತಿಯಿಂದ ಸೋಮವಾರ ಆಯೋಜಿಸಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಸವಣ್ಣನ ಅನುಯಾಯಿಯಾಗಿ, ದಾಸ ಸಾಹಿತ್ಯದ ಮೂಲಕ ಸಮಾಜದ ಡೊಂಕು ತಿದ್ದುವ ಕಾರ್ಯ ಮಾಡಿದ ಅಂಬಿಗರ ಚೌಡಯ್ಯ ಅವರ ಕೆಲಸ ಶ್ಲಾಘನೀಯ. ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕೆಂದರು.

    ತಾಲೂಕಿನ ಎಲ್ಲ ಕೆರೆಗಳಿಗೂ ನೀರು ತುಂಬಿಸಿ ಗಂಗಾ ಮತಸ್ಥರ ಕಸುಬಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ಗಂಗಾಮತಸ್ಥರ ಕಾರ್ಯ ಚಟುವಟಿಗಳಿಗೆ ಅನುಕೂಲವಾಗಲೆಂದು ನಿವೇಶನ ನೀಡಿದ್ದು, ಮುಂದಿನ ದಿನಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸಹಕರಿಸುವುದಾಗಿ ತಿಳಿಸಿದರು.
    ತಹಸೀಲ್ದಾರ್ ಬಿ.ಎಂ.ಗೋವಿಂದರಾಜು, ಗಂಗಾ ಮತಸ್ಥರ ಸಂಘದ ತಾಲೂಕು ಅಧ್ಯಕ್ಷ ಸಿ.ಜಿ.ಕುಮಾರ್, ಉಪಾಧ್ಯಕ್ಷ ಬೋರಣ್ಣ ಹಿರೀಸಾವೆ, ಕಾರ್ಯದರ್ಶಿ ಎಚ್.ಎಸ್.ವೆಂಕಟೇಶ್, ಸಮಾಜದ ಮುಖಂಡರಾದ ಶ್ರವಣೇರಿ ಮಂಜುನಾಥ್, ನುಗ್ಗೇಹಳ್ಳಿ ಪಿಎಸಿಸಿ ಬ್ಯಾಂಕ್ ನಿರ್ದೇಶಕ ಜಂಬೂರು ರಮೇಶ್ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts