More

    ಹೊತ್ತಿ ಉರಿದ ಡಸ್ಟರ್ ಕಾರು

    ಲಕ್ಷ್ಮೇಶ್ವರ: ತಾಲೂಕು ಪಂಚಾಯಿತಿ ಅಧ್ಯಕ್ಷ ಪರಸಪ್ಪ ಇಮ್ಮಡಿ ಅವರ ಡಸ್ಟರ್ ಕಾರು ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಘಟನೆ ಅಡರಕಟ್ಟಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ. ಕಾರನ್ನು ಚಲಾಯಿಸುತ್ತಿದ್ದ ಪರಸಪ್ಪ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

    ಘಟನೆ ವಿವರ: ತಾಲೂಕು ಪಂಚಾಯತಿ ಅಧ್ಯಕ್ಷ ಪರಸಪ್ಪ ಇಮ್ಮಡಿ ಅವರು ತಮ್ಮ ಸ್ವಗ್ರಾಮ ಬಟ್ಟೂರಿನಿಂದ ಲಕ್ಷ್ಮೇಶ್ವರಕ್ಕೆ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ, ಕಾರಿನ ಮುಂಭಾಗದಲ್ಲಿ ಸುಟ್ಟ ವಾಸನೆ ಬಂದು ಹೊಗೆ ಕಾಣಿಸಿಕೊಂಡಿದೆ. ಇದರಿಂದ ಅನುಮಾನಗೊಂಡ ಪರಸಪ್ಪ, ಕೂಡಲೇ ಕಾರನ್ನು ನಿಲ್ಲಿಸಿ ಹೊರ ಬರುತ್ತಿರುತ್ತಿದ್ದಂತೆಯೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲಿದ್ದ ಜನರು ಬೆಂಕಿ ಆರಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಾಗಲೇ ಕಾರು ಸುಟ್ಟು ಕರಕಲಾಗಿತ್ತು. ಕಾರಿನಲ್ಲಿ ಪರಸಪ್ಪ ಮಾತ್ರ ಇದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts