ಬೆಂಗಳೂರು: ಆಗಸ್ಟ್ 23 ರಿಂದ 9 ರಿಂದ 12ನೇ ತರಗತಿವರೆಗೆ ಶಾಲಾ ಕಾಲೇಜು ಪ್ರಾರಂಭವಾಗುತ್ತವೆ. ಸಿಎಂ ಕೂಡ ಶಾಲೆ ಪ್ರಾರಂಭ ಘೋಷಿಸಿದ್ದಾರೆ. ಅದಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳ್ತಿದ್ದೇವೆ. ಇವತ್ತು ಮಾರ್ಗಸೂಚಿ ರಿಲೀಸ್ ಮಾಡ್ತಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್, ಈಗಾಗಲೇ ಡಿಸಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ ಕಡೆ 9 ರಿಂದ 12 ನೇ ತರಗತಿಗಳು ನಡೆಯುತ್ತವೆ. ಶಿಕ್ಷಕರಿಂದಲೂ ಶಾಲೆ ಪ್ರಾರಂಭಕ್ಕೆ ಬೆಂಬಲವಿದೆ. ಶಾಲಾ ಶಿಕ್ಷಕರಿಗೆ ಆದ್ಯತೆಯ ಮೇರೆಗೆ ಕರೊನಾ ಲಸಿಕೆ ನೀಡಲಾಗುವಂತೆ ಅದಾಗಲೇ ಬಿಇಒಗಳಿಗೆ ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ: ಒಲಿಂಪಿಕ್ಸ್ ಪದಕ ಗೆದ್ದ ಸಿಂಧುಗೆ ಐಸ್ ಕ್ರೀಂ ಕೊಡಿಸಿದ ಪ್ರಧಾನಿ ಮೋದಿ!
ಕರೊನಾ ಹಿನ್ನೆಲೆಯಲ್ಲಿ ಸುರಕ್ಷತೆಗಾಗಿ ಮಕ್ಕಳಿಗೆ ಪೂರಕವಾದ ಎಸ್ಒಪಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದ ಸಚಿವರು, ಮಕ್ಕಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಮನೆಯಿಂದ ಶಾಲೆಗೆ ಬಂದು, ಮತ್ತೆ ಮನೆಗೆ ವಾಪಸಾಗುವವರೆಗೆ ಮಾಸ್ಕ್ ಇರಬೇಕು. ಇದನ್ನು ಶಿಕ್ಷಕರು ನೋಡಿಕೊಳ್ತಾರೆ ಎಂದು ಸಚಿವ ನಾಗೇಶ್ ಹೇಳಿದ್ದಾರೆ.
VIDEO| ಗದ್ದೆಗಿಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ!
VIDEO | ಗಾಳಿಪಟದ ದಾರಕ್ಕೆ ಸಿಲುಕಿ ಒದ್ದಾಡುತ್ತಿದ್ದ ಮೈನಾ ಹಕ್ಕಿ; ನಡೆಯಿತು ರಕ್ಷಣಾ ಕಾರ್ಯಾಚರಣೆ!