ಚಂಡೀಗಢ: ಹರಿಯಾಣದ ಕರ್ನಲ್ ಜಿಲ್ಲೆಯ ಮರ್ದನ್ಹೇರಿ ಗ್ರಾಮದ ಅಸ್ಸಾಂಧ್-ಕೈಥಲ್ ರಸ್ತೆಯಲ್ಲಿ ಪೊಲೀಸ್ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ನೇಹಿತರು ದುರಂತ ಸಾವಿಗೀಡಾಗಿದ್ದಾರೆ. ಶುಕ್ರವಾರ ರಾತ್ರು ಘಟನೆ ನಡೆದಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿಯು ಸಹ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತರನ್ನು ಜಿಂದ್ ಜಿಲ್ಲೆಯ ಸಫಿದಾನ್ ಪಟ್ಟಣದ ಪ್ರಯಾಗ್ (20) ಮತ್ತು ಕಾರ್ತಿಕ್ (26) ಹಾಗೂ ಕೈಥಲ್ನ ಡಿಯೋರಾ ಗ್ರಾಮದ ಸವಿಂದರ್ ಸಿಂಗ್ (32) ಎಂದು ಗುರುತಿಸಲಾಗಿದೆ. ಗಾಯಾಳು ಪೇದೆಗಳಾದ ವೇದ್ ಪ್ರಕಾಶ್ ಮತ್ತು ಸಮಿತ್ ಕುಮಾರ್ಗೆ ಚಿಕಿತ್ಸೆ ಮುಂದುವರಿದಿದೆ.
ಇದನ್ನೂ ಓದಿ: ತುಮಕೂರಲ್ಲಿ ದೇವೇಗೌಡ ಸೋತಿದ್ದು ಏಕೆ ಗೊತ್ತಾ? ಜೆಡಿಎಸ್ ಶಾಸಕರೇ ಬಿಚ್ಚಿಟ್ಟ ಸತ್ಯ ಇದು…
ಮೂಲಗಳ ಪ್ರಕಾರ ಡಿಸೆಂಬರ್ 25ರಂದು ಸವಿಂದರ್ ಸಿಂಗ್ಗೆ ಮದುವೆ ನಿಶ್ಚಯವಾಗಿತ್ತು. ಮೂವರು ಸ್ನೇಹಿತರು ಮದುವೆ ಶಾಪಿಂಗ್ ಮುಗಿಸಿ ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಕಾರಿಗೆ ಎದುರಾದ ಪೊಲೀಸ್ ವಾಹನವು ಇತ್ತೀಚೆಗೆ ಕೈಥಾಲ್ನಿಂದ ಪಾಣಿಪತ್ಗೆ ವರ್ಗಾವಣೆಯಾದ ಪೊಲೀಸ್ ವರಿಷ್ಠಾಧಿಕಾರಿ ಶಶಾಂಕ್ ಕುಮಾರ್ರನ್ನು ಬರಮಾಡಿಕೊಳ್ಳಲು ತೆರಳುತ್ತಿತ್ತು.
ಟ್ರ್ಯಾಕ್ಟರ್ ಟ್ರೈಲರ್ ಇದ್ದಕ್ಕಿದ್ದಂತೆ ಎದುರಾಗಿದ್ದರಿಂದ ಅದನ್ನು ತಪ್ಪಿಸಲು ಜೋರಾಗಿ ಬ್ರೇಕ್ ಹಾಕಿದರೂ ಪೊಲೀಸ್ ವಾಹನ ಕೊನೆಗೆ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಏಜೆನ್ಸೀಸ್)
ಇದನ್ನೂ ಓದಿ: ನಾನಿನ್ನು ಚಿಕ್ಕ ಹುಡುಗಿ ಸದ್ಯಕ್ಕೆ ಆ ಮಾತು ಕೇಳಲೇಬೇಡಿ ಎಂದ ಅನುಪಮಾ ಪರಮೇಶ್ವರನ್..!
ವಿವಾಹಿತ ಕಾನ್ಸ್ಟೇಬಲ್ ಜತೆ ಮಹಿಳಾ ಎಸ್ಐ ಲವ್ವಿಡವ್ವಿ: ಏನೇ ಮಾಡಿದ್ರೂ ಸಂಬಂಧ ಮಾತ್ರ ಬಿಡ್ತಿಲ್ಲ!
ಎಲ್ಲರಂಥಲ್ಲ ಈ ವೈದ್ಯೆ: 10 ರೂಪಾಯಿ ಕೊಟ್ಟರೆ ಸಾಕು, ಕಾಯಿಲೆಗಳೆಲ್ಲವೂ ವಾಸಿ!
ಅಪಘಾತದಲ್ಲಿ ಮೃತಪಟ್ಟ ಹೆಬ್ಬಾವಿಗೆ ಅಂತ್ಯಸಂಸ್ಕಾರ: ಗ್ರಾಮಸ್ಥರ ಮಾತು ಕೇಳಿದ್ರೆ ಫಿದಾ ಗ್ಯಾರೆಂಟಿ!