ಬೆಂಗಳೂರು: ಕರೊನಾ ಸಂಕಷ್ಟವು ಒಂದು ದುಸ್ವಪ್ನವಾಗಿ ಕಾಡಿದೆ. ಈ ಸಂಕಷ್ಟದ ನಡುವೆಯೂ ಸರ್ಕಾರ ಉತ್ತಮವಾಗಿ ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
2021-22ನೇ ಸಾಲಿನ ಬಜೆಟ್ ಮಂಡನೆ ಆರಂಭಕ್ಕೂ ಮುನ್ನ ಕರೊನಾ ಹಾಗೂ ನೆರೆ ಪರಿಸ್ಥಿತಿ ಬಗ್ಗೆ ಸಿಎಂ ಬಿಎಸ್ವೈ ಮಾತನಾಡಿದರು. ನಮ್ಮ ಸರ್ಕಾರದಲ್ಲಿ ಅತಿವೃಷ್ಠಿ, ಅನಾವೃಷ್ಠಿ ನಿರಂತರ ಸವಾಲಾಗಿತ್ತು, ಇದರೊಂದಿಗೆ ಕರೊನಾ ದುಸ್ವಪ್ನವಾಗಿ ಕಾಡಿತು. ಕೋವಿಡ್ನಿಂದಾಗಿ ಇಡೀ ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ ಎಂದರು.
ಜನರಿಗೆ ಉಚಿತ ಕರೊನಾ ಚಿಕಿತ್ಸೆ ನೀಡಲಾಗಿದೆ. ಫೆಬ್ರವರಿ ಅಂತ್ಯಕ್ಕೆ 1.91 ಕೋಟಿ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿದೆ. ಕಟ್ಟಡ ಕಾರ್ಮಿಕರಿಗೆ ಆಹಾರ ಪೊಟ್ಟಣ ನೀಡಲಾಗಿದೆ. ರಾಜ್ಯ ಕಾರ್ಯಕ್ಷಮತೆಯನ್ನು ಪ್ರಧಾನಿ ಮೋದಿ ಮೆಚ್ಚಿದ್ದಾರೆ. ಪಿಪಿಇ ಕಿಟ್ ಉತ್ಪಾದನೆಯಲ್ಲಿ ಹೆಚ್ಚಳ ಮಾಡಲಾಗಿದೆ. ಕೋವಿಡ್ ಲಸಿಕೆ ಹಂಚಿಕೆಯಲ್ಲಿ ರಾಷ್ಟ್ರದ ಗಮನ ಸೆಳೆದಿದ್ದೇವೆ ಎಂದರು.
ಕೋವಿಡ್ ವಾರಿಯರ್ಸ್ಗೆ ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದ ಬಿ.ಎಸ್.ಯಡಿಯೂರಪ್ಪ, ಕೋವಿಡ್ ಕಾಲದಲ್ಲಿ ಕಲಿತ ಪಾಠ ಸ್ಮರಣೀಯವಾಗಿದೆ ಎಂದು ತಿಳಿಸಿದರು.