ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳೆ ಸಿಡಿ ಕೇಸ್ ಕ್ಷಣ ಕ್ಷಣಕ್ಕೂ ಹೊಸ ಹೊಸ ವಿವಾದಗಳನ್ನು ಸೃಷ್ಟಿ ಮಾಡುತ್ತಲೇ ಸಾಗಿದೆ. ಈ ವಿಚಾರದ ಕುರಿತಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಮುಂದುವರೆದಿದೆ.
ಬಿಜೆಪಿ ಸಚಿವರಾಗಿದ್ದವರ ವಿರುದ್ಧ ಸಿಡಿ ಕೇಸ್ ಬಂದಿದ್ದರಿಂದ ಕಾಂಗ್ರೆಸ್ನವರು ಎಲ್ಲಾ ಬಿಜೆಪಿ ಮುಖಂಡರ ವಿರುದ್ಧ ಟೀಕೆ ಮಾಡುತ್ತಿದ್ದರೆ ಇದೀಗ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರಮೇಶ್ ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ?” ಎಂದು ಸುಧಾಕರ್ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನೂ ಸೇರಿದಂತೆ 224 ಶಾಸಕರ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನೂ ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ತಿಳಿಸಿದರು.
ಈ ವಿಷಯವನ್ನು ಸದನಲ್ಲಿ ಕೂಡ ಹೇಳಬೇಕು ಅಂದುಕೊಂಡಿದ್ದೆ.. ಮರ್ಯಾದಾ ಪುರುಷರು, ಸತ್ಯಹರಿಶ್ಚಂದ್ರರು ಯಾರ್ಯಾರು ಇದ್ದಾರೆ ಗೊತ್ತಾಗಿಹೋಗಲಿ, ತಾವು ಶ್ರೀರಾಮಚಂದ್ರರು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮಾತನಾಡುತ್ತಿದ್ದಾರಲ್ಲ. ಅವರಿಗೆ ಒಂದು ಸವಾಲ್ ಹಾಕುತ್ತೇನೆ. 225 ಜನ ಕೂಡ ತನಿಖೆಗೆ ಒಳಪಡಲಿ. ನಿಮ್ಮ ನಿಮ್ಮ ಜೀವನದಲ್ಲಿ ಯಾರು ಅನೈತಿಕ ಸಂಬಂಧ ಇಟ್ಟುಕೊಂಡಿಲ್ಲ ಎಂಬುದು ಸಾಬೀತಾಗಿ ಹೋಗಲಿ ಎಂದರು.
ಈ ಸವಾಲು ಇದೀಗ ಎಲ್ಲ ಪಕ್ಷದಲ್ಲಿಯೂ ಭಾರಿ ಕೋಲಾಹಲ ಸೃಷ್ಟಿ ಮಾಡಿದೆ.
ಡಿಪ್ಲೋಮಾ, ಹಿಂದಿ- ಇಂಗ್ಲಿಷ್ನಲ್ಲಿ ಸ್ನಾತಕ ಪದವೀಧರರಿಗೆ ಭರ್ಜರಿ ಅವಕಾಶ: ರೈಲ್ವೆಯಲ್ಲಿ ಅರ್ಜಿ ಆಹ್ವಾನ
ಅಬ್ಬಾಜಾನ್ ಬನ್ನಿ… ಶರಣಾಗಿ… ಶೂಟ್ ಮಾಡಲ್ಲ… ನಾಲ್ಕು ವರ್ಷದ ಕಂದನ ಮಾತು ಕೇಳದೇ ಸತ್ತ ಉಗ್ರ!
ಹೆಂಡ್ತಿ ಕಳ್ಳತನ ಮಾಡ್ತಾಳೆ, ಗಲ್ಲಿಗಲ್ಲಿ ತಿರಗ್ತಾಳೆ, ಒಬ್ಬಳೇ ನಗ್ತಾಳೆ- ಭಯವಾಗ್ತಿದೆ, ಇದೇನಿದು ಮೇಡಂ?