ಹುಬ್ಬಳ್ಳಿ: ಸೀರಿಯಲ್ ನಟಿಗಾಗಿ ಕೊಲೆ ಮಾಡಿ ರುಂಡ-ಮುಂಡ ಬೇರ್ಪಡಿಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆ ಮೂಲಕ ಕೊಲೆ ಪ್ರಕರಣವೊಂದರ ರಹಸ್ಯ ಭೇದಿಸಲ್ಪಟ್ಟಿದ್ದು, ಕೊಲೆ ಹಿಂದಿನ ಪ್ರೇಮಕಥೆ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯ ದೇವರಗುಂಡಿಹಾಳದಲ್ಲಿ ಇತ್ತೀಚೆಗೆ ರುಂಡವೊಂದು ಸಿಕ್ಕಿತ್ತು. ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಗಿಳಿದ ಹುಬ್ಬಳ್ಳಿ ಕೇಶ್ವಾಪೂರ ಠಾಣೆ ಪೊಲೀಸರು ಕೊನೆಗೂ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ನಿಯಾಜ್ ಅಹ್ಮದ್ ಕಟಿಗಾರ, ತೌಸಿಫ್ ಚಿನ್ನಾಪೂರ, ಅಲ್ತಾಫ ಮುಲ್ಲಾ ಹಾಗೂ ಅಮನ ಗಿರಣಿವಾಲೆ ಬಂಧಿತರು.
ತನಿಖೆ ನಡೆಸಿದ ಪೊಲೀಸರಿಗೆ ಸೀರಿಯಲ್ ನಟಿ ಶನಾಯ್ ಕಾಟ್ವೆ ಎಂಬಾಕೆಗಾಗಿ ಈ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಕೊಲೆ ಆರೋಪಿ ನಿಯಾಜ್ ಹಾಗೂ ಶನಾಯ್ಗೂ ಪ್ರೇಮವಿತ್ತು. ಆದರೆ ಅದಕ್ಕೆ ಯುವತಿಯ ಸೋದರ ರಾಕೇಶ್ ಅಡ್ಡಿಯಾಗಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಗಳು ಆತನನ್ನು ಕೊಲೆಗೈದು, ರುಂಡ ಬೇರ್ಪಡಿಸಿ ದೇವರಗುಂಡಿಹಾಳದಲ್ಲಿ ಎಸೆದಿದ್ದರು. ಬಳಿಕ ದೇಹದ ಉಳಿದ ಭಾಗಗಳನ್ನು ಸುಟ್ಟುಹಾಕಿ ಸಾಕ್ಷ್ಯನಾಶಕ್ಕೆ ಯತ್ನಿಸಿದ್ದರು. ಅದಾಗ್ಯೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ಧಾರವಾಡ ಎಸ್ಪಿ ಕೃಷ್ಣಕಾಂತ್ ಮಾಹಿತಿ ನೀಡಿದ್ದಾರೆ.
ಕೋವಿಡ್ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬ ಚಿಂತೆಯೇ?; ಇಲ್ಲಿದೆ ನೋಡಿ ರಿಯಲ್ ಟೈಮ್ ಮಾಹಿತಿ