ಬೆಂಗಳೂರು: ಮಾಜಿ ಸಚಿವರ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಎನ್ನಲಾದ ಯುವತಿಯು ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ತನ್ನನ್ನೂ ಪ್ರತಿವಾದಿಯಾಗಿಸುವಂತೆ ಕೋರ್ಟ್ಗೆ ಮನವಿ ಮಾಡಿದ್ದಾಳೆ.
ಪ್ರಕರಣ ಸಂಬಂಧ ಗುರುವಾರ ಎಸ್ಐಟಿಯಿಂದ ತನಿಖಾ ಪ್ರಗತಿ ವರದಿ ಸಲ್ಲಿಕೆಯಾಗಿದೆ. ಯುವತಿ ಪರ ಸುಪ್ರೀಂ ಕೋರ್ಟ್ ವಕೀಲೆ ಇಂದಿರಾ ಜೈಸಿಂಗ್ ವಾದ ಮಂಡಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಎಜಿ ವಾದಿಸಿದ್ದಾರೆ. ಎಸ್ಐಟಿ ತನಿಖೆ ಪ್ರಶ್ನಿಸಿ ಈಗಾಗಲೇ ಯುವತಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾಳೆ.
ಇನ್ನು ಯುವತಿ ಕೊಟ್ಟಿರುವ ದೂರನ್ನು ಎಸ್ಐಟಿ ಮುಕ್ತಾಯಗೊಳಿಸುವ ಸಾಧ್ಯತೆ ಇದೆ. ಯುವತಿಯ ಅರ್ಜಿಯನ್ನು ಪಿಐಎಲ್ನೊಂದಿಗೆ ಲಿಸ್ಟ್ ಮಾಡಲು ಮನವಿ ಮಾಡಲಾಗಿದ್ದು, ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ತನಿಖಾ ವರದಿಗೆ ಜಂಟಿ ಪೊಲೀಸ್ ಆಯುಕ್ತರು ಸಹಿ ಮಾಡಿದ್ದಾರೆ.
ನಿನ್ನೆ ಹೈಕೋರ್ಟ್ಗೆ ಎಸ್ಐಟಿ ವರದಿ ನೀಡಿದ್ದು, ಪಿಐಎಲ್ಗೆ ಮಾಜಿ ಸಚಿವರ ಪರ ವಕೀಲ ಸಿ.ವಿ.ನಾಗೇಶ್ ಲಿಖಿತ ರೂಪದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಚ್ಚಿದ ಲಕೋಟೆಯಲ್ಲಿ ತನಿಖಾ ಪ್ರಗತಿ ವರದಿ ಇಡಲು ಹೈಕೋರ್ಟ್ ಸೂಚನೆ ನೀಡಿದ್ದು, ಜೂನ್ 23ಕ್ಕೆ ವಿಚಾರಣೆ ಮೂಂದೂಡಿದೆ. (ದಿಗ್ವಿಜಯ ನ್ಯೂಸ್)
ಪಬ್ಜಿ ಲೈವ್ ಸ್ಟ್ರೀಮಿಂಗ್ನಲ್ಲಿ ಅಶ್ಲೀಲತೆ: ಚೆನ್ನೈ ಮೂಲದ ಯೂಟ್ಯೂಬರ್ ದಂಪತಿಯ ಬಂಧನ!
ಅಮೆರಿಕಕ್ಕೆ ಹೋಗಬಯಸುವ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಕೋವಿಡ್ ಲಸಿಕೆ ಕಡ್ಡಾಯವಲ್ಲ
ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಾನೆ ಗಂಡ! ಬೆಚ್ಚಿಬೀಳಿಸುತ್ತೆ ದಂಪತಿ ಕೃತ್ಯ
ಸ