ಚೆನ್ನೈ: ನಿನ್ನೆ (ಡಿಸೆಂಬರ್ 8) ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಇಡೀ ದೇಶವೇ ಶೋಕ ಸಾಗರದಲ್ಲಿ ಮುಳುಗಿದೆ. ಸುರಕ್ಷಿತವಾಗಿದ್ದ ರಷ್ಯಾ ನಿರ್ಮಿತ ಎಂಐ-17 ಚಾಪರ್ ಪತನವಾಗಿದ್ದು ಹೇಗೆ ಎಂಬ ನಿಗೂಢ ಪ್ರಶ್ನೆಯೊಂದು ಹಾಗೇ ಉಳಿದಿದೆ.
ಘಟನೆ ಸಂಬಂಧ ಈಗಾಗಲೇ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಪತನಕ್ಕೆ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭವಾಗಿದ್ದು, ಅದಕ್ಕೆ ಪೂರಕವಾಗಿ ಸೇನೆಗೆ ಬ್ಲಾಕ್ ಬಾಕ್ಸ್ ಸಿಕ್ಕಿದೆ. ಬ್ಲಾಕ್ಬಾಕ್ಸ್ನಿಂದ ಹೆಲಿಕಾಪ್ಟರ್ನ ಅಂತಿಮ ಹಂತದ ಪರಿಸ್ಥಿತಿ ಬಗೆಗಿನ ಡಾಟಾ ಮತ್ತು ಕಾಕ್ಪಿಟ್ನಲ್ಲಿ ನಡೆದ ಸಂಭಾಷಣೆಗಳ ವಿವರ ಲಭ್ಯವಾಗಲಿದೆ.
ಬ್ಲಾಕ್ಬಾಕ್ಸ್ ಡೇಟಾವು ಹೆಲಿಕಾಪ್ಟರ್ ಪತನಕ್ಕೆ ಕಾರಣವಾದ ಅಂಶವನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ. ಹೀಗಾಗಿ ಬ್ಲಾಕ್ಬಾಕ್ಸ್ನಲ್ಲಿ ಏನಿದೆ ಎಂಬುದರ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಕ್ಷಣಾರ್ಧದಲ್ಲಿ ಘಟಿಸಿದ ಘೋರ ದುರಂತದ ಹಿಂದಿನ ಕಾರಣವನ್ನು ತಿಳಿದುಕೊಳ್ಳಲು ಇಡೀ ದೇಶವೇ ಎದುರು ನೋಡುತ್ತಿದ್ದು, ಬ್ಲಾಕ್ಬಾಕ್ಸ್ ಡಾಟಾ ಮೇಲೆ ಕುತೂಹಲ ನೆಟ್ಟಿದೆ.
ನಿನ್ನೆ ನಡೆದಿದ್ದೇನು?
ನಿನ್ನೆ ವೆಲ್ಲಿಂಗ್ಟನ್ನ ಮಿಲಿಟರಿ ಶಾಲೆಯಲ್ಲಿ ನಿಗದಿಯಾಗಿದ್ದ ಸೆಮಿನಾರ್ಗೆಂದು ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯ್ತೇಜ್, ಹವಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಬುಧವಾರ ರಷ್ಯಾ ನಿರ್ಮಿತ ಸೇನಾ ಹೆಲಿಕಾಪ್ಟರ್ Mi-17V5 ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಹೆಲಿಕಾಪ್ಟರ್ ಪತನಗೊಂಡು ಬಿಪಿನ್ ರಾವತ್ ದಂಪತಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಸಿಡಿಎಸ್ ಬಿಪಿನ್ ರಾವತ್ ನಿಧನಕ್ಕೇ ಇಡೀ ದೇಶವೇ ಕಂಬನಿ ಮಿಡಿದಿದೆ. (ಏಜೆನ್ಸೀಸ್)
ಸೇನಾ ಹೆಲಿಕಾಪ್ಟರ್ ಪತನ: ಸೇನಾ ಮುಖ್ಯಸ್ಥರಿದ್ದ ಕಾಪ್ಟರ್ ಪತನಕ್ಕೂ ಮುನ್ನ ಕೊನೇ ದೃಶ್ಯ ಲಭ್ಯ
ಹೆಲಿಕಾಪ್ಟರ್ ಪತನದ ವೈರಲ್ ವಿಡಿಯೋಗೂ ಸೇನಾ ಮುಖ್ಯಸ್ಥರಿದ್ದ ಕಾಪ್ಟರ್ ಪತನಕ್ಕೂ ಸಂಬಂಧವಿಲ್ಲ: ನಿಜಾಂಶ ಇಲ್ಲಿದೆ!
2015ರಲ್ಲಿ ರಾವತ್ ಬಳಿ ಸುಳಿದುಹೋಗಿದ್ದ ಜವರಾಯ! ಕೂದಲೆಳೆ ಅಂತರದಲ್ಲಿ ಪಾರಾಗಿದ್ದ ಜನರಲ್…