ಹುಬ್ಬಳ್ಳಿ: ಇಯರ್ ಫೋನ್ ಹಾಕಿಕೊಂಡು ರೈಲು ಹಳಿ ದಾಟುತ್ತಿದ್ದ ಮೌಲ್ವಿಯೊಬ್ಬರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡದ ಶಕ್ತಿ ನಗರದಲ್ಲಿ ನಡೆದಿದೆ.
ಶಕ್ತಿ ನಗರದ ಮಹಮ್ಮದ ರಿಯಾಜ್ ಶೇಕ್ (28) ಮೃತಪಟ್ಟ ವ್ಯಕ್ತಿ. ರಿಯಾಜ್ ಶಕ್ತಿ ನಗರದಲ್ಲಿ ಪ್ರವಚನ ನೀಡಿ ವಾಪಸ್ ಬರುತ್ತಿದ್ದರು. ಈ ವೇಳೆ ಇಯರ್ ಫೋನ್ ಹಾಕಿಕೊಂಡು ರೈಲು ಹಳಿ ದಾಟಲು ಮುಂದಾಗಿದ್ದರು. ಇದೇ ವೇಳೆ ಏಕಾಏಕಿ ಬಂದ ರೈಲು ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಹುಬ್ಬಳ್ಳಿ ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.