ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಕಾರು ಜಪ್ತಿ ಮಾಡುವಂತೆ ಕೋರ್ಟ್ ಆದೇಶಿಸಿದೆ.
ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯ ಸರ್ಕಾರಿ ಕಾರನ್ನು ಜಪ್ತಿ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಬಂದ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು, ಕಾರಿನ ಮೇಲೆ ನೋಟಿಸ್ ಅಂಟಿಸಿದರು.
ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆ ಅವರಿಗೆ ಪರಿಹಾರ ನೀಡದೆ ವಿಳಂಬ ಮಾಡಿದ್ದ ಜಿಲ್ಲಾಧಿಕಾರಿಗೆ ಕೋರ್ಟ್ ಬಿಸಿ ಮುಟ್ಟಿಸಿದೆ.
ರೈತ ಕಲ್ಲಪ್ಪ ಮೇತ್ರೆ ಅವರ 33 ಗುಂಟೆ ಜಮೀನು 2008ರಲ್ಲಿ ಭೀಮಾ ಏತನಿರಾವರಿ ಯೋಜನೆಯಡಿ ಮುಳುಗಡೆಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ 7,39,632 ರೂಪಾಯಿ ಪರಿಹಾರ ನೀಡವಂತೆ ಕೋರ್ಟ್ ಆದೇಶಿಸಿತ್ತು. ಆದರೂ ಪರಿಹಾರ ನೀಡದೆ ಜಿಲ್ಲಾಡಳಿತ ಸತಾಯಿಸಿತ್ತು. ಈ ಸಂಬಂಧ ಗರಂ ಆದ ಕೋರ್ಟ್, ಡಿಸಿ ಕಾರನ್ನೇ ಜ್ಪತಿ ಮಾಡುವಂತೆ ಆದೇಶಿಸಿದೆ.
ಲೋಕ ರಕ್ಷಿಸುವ ಮಾಯೆ ನಾನು, ನಿಮ್ಮನ್ನು ಕಾಪಾಡುವೆ… ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ