ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಗೋಕುಲ್ಪುರಿ ಏರಿಯಾದ ಗುಡಿಸಲು ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 7 ಮಂದಿ ಸಜೀವ ದಹನವಾಗಿದ್ದು, ಸುಮಾರು 60 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.
ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ದೂರವಾಣಿ ಕರೆ ಸ್ವೀಕರಿಸಿದರು. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಸುಮಾರು 13 ಅಗ್ನಿಶಾಮಕ ವಾಹನ ದೌಡಾಯಿಸಿ, ಕೆಲವೇ ಗಂಟೆಗಳಲ್ಲಿ ಬೆಂಕಿಯನ್ನು ನಂದಿಸಿದವು.
ಈ ಬಗ್ಗೆ ಮಾತನಾಡಿರುವ ದೆಹಲಿಯ ಅಗ್ನಿಶಾಮಕ ನಿರ್ದೇಶಕ ಅತುಲ್ ಗಾರ್ಗ್, ಗುರುತು ಸಿಕ್ಕಿದ 7 ಸುಟ್ಟ ದೇಹಗಳನ್ನು ಹೊರತೆಗೆದಿದ್ದೇವೆ. ಮೃತರು ಮಲಗಿದ್ದ ವೇಳೆ ಅವಘಡ ಸಂಬಂಧಿಸಿದ್ದರಿಂದ ಮತ್ತು ಬೆಂಕಿ ವೇಗವಾಗಿ ಹರಡಿದ್ದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. 60 ಗುಡಿಸಲುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ಹಿಂದಿನ ಕಾರಣಗಳು ನಮಗೆ ಇನ್ನೂ ತಿಳಿದಿಲ್ಲ ಎಂದು ಹೇಳಿದ್ದಾರೆ.
ಘಟನೆಯ ಬೆನ್ನಲ್ಲೇ ಟ್ವೀಟ್ ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂತಾಪ ಸೂಚಿಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಮುಖಂಡ ಹಾಗೂ ಈಶಾನ್ಯ ದೆಹಲಿಯ ಸಂಸದ ಮನೋಜ್ ತಿವಾರಿ, ಘಟನೆಯ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ. ಅಲ್ಲದೆ, ಮೃತರಿಗೆ ತಲಾ ಒಂದೊಂದು ಕೋಟಿ ಅನುದಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. (ಏಜೆನ್ಸೀಸ್)
ಮೊದಲ ಬಾರಿ ಬಿಕಿನಿಯಲ್ಲಿ ಕಾಣಿಸಿಕೊಂಡ ಸೌತ್ ಬ್ಯೂಟಿ ವರು! ವಿಡಿಯೋ ನೋಡಿ ಹುಬ್ಬೇರಿಸಿದ ಅಭಿಮಾನಿಗಳು
ಪಾಕ್ ಯುವತಿ ಜತೆ ಮದ್ವೆಯಾದ ಬೆನ್ನಲ್ಲೇ ಆತ್ಮಾಹುತಿ ದಾಳಿ ನಡೆಸಿದ ಕೇರಳದ M.Tech ವಿದ್ಯಾರ್ಥಿ!
4 ರಾಜ್ಯಗಳ ಚುನಾವಣಾ ಗೆಲುವೇ ಬಿಜೆಪಿಗೆ ದೊಡ್ಡ ನಷ್ಟವಾಗಲಿದೆ: ಮಮತಾ ಬ್ಯಾನರ್ಜಿ ಕೊಟ್ಟ ವಿವರಣೆ ಹೀಗಿದೆ…