ಬೆಂಗಳೂರು: ಚಾಕು ಇರಿತಕ್ಕೊಳಗಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಸ್ಕೆಆರ್ ಮಾರ್ಕೆಟ್ ವಾರ್ಡ್ನ ಮಾಜಿ ಸದಸ್ಯ ಅಯೂಬ್ ಖಾನ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ಈ ಹಿಂದೆ ಅಯೂಬ್ ಖಾನ್ ರಾಜಕೀಯವಾಗಿ ಬೆಳೆಯಲು ತನ್ನ ಕುಟುಂಬದ ಸದಸ್ಯರನ್ನು ಬಳಸಿಕೊಂಡಿದ್ದು, ಇದೀಗ ರಾಜಕೀಯವಾಗಿ ಬೆಳೆದ ಬಳಿಕ ಎಲ್ಲರನ್ನೂ ದೂರು ಮಾಡಿದ್ದಾರೆ ಎನ್ನಲಾಗಿದೆ. ಇದೇ ವಿಚಾರವಾಗಿ ಇವರ ಸಹೋದರನ ಪುತ್ರ ಮತ್ತಿನ್ ಖಾನ್ ನಡುವೆ ಪದೇಪದೆ ಗಲಾಟೆ ನಡೆಯುತ್ತಿತ್ತು. ಬುಧವಾರ ರಾತ್ರಿ ಕೂಡ ಚಾಮರಾಜಪೇಟೆಯ ವಿನಾಯಕ ಚಿತ್ರಮಂದಿರ ಸಮೀಪ ಅಯೂಬ್ ಖಾನ್ ಮನೆ ಬಳಿ ಮತ್ತಿನ್ ಗಲಾಟೆ ಮಾಡಿದ್ದ. ಜಗಳ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಮತ್ತಿನ್, ಚಾಕುವಿನಿಂದ ಅಯೂಬ್ ಖಾನ್ ಹೊಟ್ಟೆಗೆ ಇರಿದಿದ್ದ.
ತೀವ್ರ ರಕ್ತಸ್ರಾವದಿಂದ ಕೆಳಗೆ ಬಿದ್ದಿದ್ದ ಅಯೂಬ್ ಖಾನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಯೂಬ್ ಮೃತಪಟ್ಟಿದ್ದಾರೆ. ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಮಸೀದಿ ಅಧ್ಯಕ್ಷ ಪಟ್ಟವೇ ಕಾರಣ ಎಂದು ಅಯುಬ್ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಟಿಪ್ಪುನಗರದ ಖುದಾಯತ್ ಮಸೀದಿಗೆ ಅಯೂಬ್ ಅಧ್ಯಕ್ಷರಾಗಿದ್ದರು. ಈ ಸ್ಥಾನ ಬಿಟ್ಟುಕೊಡುವಂತೆ ಅಯೂಬ್ರ ಮತ್ತೀನ್ ಗಲಾಟೆ ಮಾಡುತ್ತಿದ್ದ. ಇದೇ ವಿಚಾರವಾಗಿ ಈ ಹಿಂದೆ ಕೊಲೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹೆತ್ತಮ್ಮನ ಸಾವಿನ ನೋವಲ್ಲೇ ಪರೀಕ್ಷೆ ಬರೆದ ಸ್ಫೂರ್ತಿ: ಅಜ್ಜ-ಅಜ್ಜಿಯ ಸಾವು ಮಾಸುವ ಮುನ್ನವೇ ಅಮ್ಮನೂ ದೂರ…
ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಯುವಕ ಸಾವು: ಆಟ ಆಡುತ್ತಿರುವಾಗಲೇ ಜೀವ ಕಸಿದ ದುರ್ವಿಧಿ