ಬೆಳಗಾವಿ: ಪ್ರಸ್ತುತ ದಿನಗಳಲ್ಲಿ ಮಾದಕ ವ್ಯಸನವು ಕ್ರಿಮಿನಲ್ ಅಪರಾಧಕ್ಕಿಂತ ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಿದೆ. ಇದರ ಪರಿಣಾಮ ಆರ್ಥಿಕತೆಯೊಂದಿಗೆ ಆರೋಗ್ಯದ ಮೇಲೂ ಬೀರುತ್ತಿದೆ ಎಂದು ಮಹಾನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದ್ದಾರೆ.
ನಗರದ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾದಕ ದ್ರವ್ಯ, ಸೈಕೋಟ್ರೋಫಿಕ್ ವಸ್ತು ಕಾಯ್ದೆ&1985 ಕುರಿತು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಅರಿವು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಮಾದಕ ದ್ರವ್ಯ, ಸೈಕೋಟ್ರೋಫಿಕ್ ವಸ್ತು ಕಾಯ್ದೆ&1985 ಅಡಿ 29 ಪ್ರಕರಣ ದಾಖಲಿಸಿದ್ದೇವೆ. ನಮ್ಮ ಅಧಿಕಾರಿಗಳು ಹಳೆಯ ಪ್ರಕರಣಗಳ ವಿಚಾರಣೆಯಲ್ಲಿ ತೊಡಗಿದ್ದಾರೆ. ಯುವಕರು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಜಿ.ಎಂ.ವಾಘ್, ನಿವೃತ್ತ ಸರ್ಕಾರಿ ಅಭಿಯೋಜಕ ಅಣ್ಣಾಸಾಹೇಬ ಪರಶೆಟ್ಟಿ, ಡಿಸಿಪಿಗಳಾದ ರವೀಂದ್ರ ಗಡಾದಿ, ಪಿ.ವಿ.ಸ್ನೇಹಾ, ಕಾಲೇಜು ಆಡಳಿತ ಮಂಡಳಿ ಅಧ್ಯ ಎಂ.ಆರ್.ಕುಲಕರ್ಣಿ, ಪ್ರಾಂಶುಪಾಲ ಎ.ಎಚ್.ಹವಾಲ್ದಾರ್ ಇದ್ದರು.