ಪಟನಾ: ಬಿಹಾರದ ಪೊಲೀಸ್ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ದುರಂತ ಸಾವಿಗೀಡಾಗಿರುವ ಘಟನೆ ಬಿಹಾರದ ಡಿಯೋರಿಯಾ ಗ್ರಾಮದ ಬಳಿಯ ಛಪ್ರಾ-ಸಿವಾನ್ ಹೆದ್ದಾರಿಯಲ್ಲಿ ಬುಧವಾರ (ಅ.12) ಬೆಳಗ್ಗೆ ನಡೆದಿದೆ.
ಪೊಲೀಸ್ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್, ಬೈಕ್ನಲ್ಲಿ ಹೋಗುತ್ತಿದ್ದವರಿಗೆ ಡಿಕ್ಕಿ ಹೊಡೆಯಿತು. ಪರಿಣಾಮ ಮೂವರು ಮೃತಪಟ್ಟರು. ಈ ವೇಳೆ ಓರ್ವ ಸವಾರ ತನ್ನ ಬೈಕ್ ಸಮೇತ ಬಸ್ಸಿನ ಅಡಿಗೆ ಸಿಲುಕಿದ ಪರಿಣಾಮ ಸುಮಾರು 90 ಮೀಟರ್ ದೂರ ಎಳೆದುಹೋಯಿತು. ಇದರಿಂದಾಗಿ ಬಸ್ ಇಂಧನ ಟ್ಯಾಂಕ್ ಸ್ಫೋಟಗೊಂಡು, ಬೈಕ್ ಸವಾರ ಸಜೀಹ ದಹನವಾದನು.
ಅಪಘಾತದ ನಂತರ ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ಆ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಅಧಿಕಾರಿಗಳು ತಮ್ಮ ಪ್ರಾಣ ಉಳಿಸಿಕೊಳ್ಳಲು ಬಸ್ನಿಂದ ಇಳಿದು ಪರಾರಿಯಾಗುತ್ತಿರುವ ದೃಶ್ಯವು ಸಹ ವಿಡಿಯೋದಲ್ಲಿದೆ.
ಬಿಹಾರದ ಸಿತಾಬ್ದಿಯಾರಾದಲ್ಲಿ ದಿವಂಗತ ರಾಜಕೀಯ ನಾಯಕ ಜಯಪ್ರಕಾಶ್ ನಾರಾಯಣ್ ಅವರ 120 ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಬಸ್ ಹಿಂತಿರುಗುತ್ತಿತ್ತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು. (ಏಜೆನ್ಸೀಸ್)
ಇರಾನ್ ಮಹಿಳೆಯರ ಮೇಲೆ ನೈತಿಕ ಪೊಲೀಸ್ಗಿರಿ: ವಿವಸ್ತ್ರಳಾಗಿ ನನ್ನ ದೇಹ ನನ್ನ ಆಯ್ಕೆ ಎಂದ ಬಾಲಿವುಡ್ ನಟಿ
ಆರ್ಥಿಕ ಏಳಿಗೆಗಾಗಿ ಮಹಿಳೆಯರಿಬ್ಬರ ಬಲಿ: ಕೇರಳ ಜನತೆಯನ್ನು ಬೆಚ್ಚಿಬೀಳಿಸಿದ ವಾಮಾಚಾರ ಪ್ರಕರಣವಿದು
ವಿಧಿ ನೀನೆಷ್ಟು ಕ್ರೂರಿ? ಭಾರತದಿಂದ ಆಸ್ಕರ್ ಪ್ರವೇಶ ಪಡೆದ ಗುಜರಾತಿ ಸಿನಿಮಾದ ಬಾಲನಟ ಇನ್ನಿಲ್ಲ