ಚೆನ್ನೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಹೈಕೋರ್ಟ್ ನಿರ್ಬಂಧ ಎದುರಾಗಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿದ್ದು, ಆರ್ಎಸ್ಎಸ್ನ ಮುಂದಿನ ನಡೆ ಕುತೂಹಲ ಕೆರಳಿಸಿದೆ. ತಮಿಳುನಾಡಿನಲ್ಲಿ ಆರ್ಎಸ್ಎಸ್ ನಾಳೆ ನಡೆಸಲು ಉದ್ದೇಶಿಸಿದ್ದ ಪಥಸಂಚಲನವು ಮದ್ರಾಸ್ ಹೈಕೋರ್ಟ್ ನಿರ್ಬಂಧದಿಂದಾಗಿ ರದ್ದುಗೊಂಡಿದೆ.
ತಮಿಳುನಾಡಿನ 44 ಸ್ಥಳಗಳಲ್ಲಿ ನ. 6ರ ಭಾನುವಾರ ಆರ್ಎಸ್ಎಸ್ ಪಥಸಂಚಲನ ನಡೆಸಲು ಉದ್ದೇಶಿಸಿತ್ತು. ಆದರೆ ಮೈದಾನ ಅಥವಾ ಕ್ರೀಡಾಂಗಣದಂಥ ಚೌಕಟ್ಟಿನ ಒಳಗಿನ ಪ್ರದೇಶಗಳಲ್ಲಿ ಮಾತ್ರ ಈ ಪಥಸಂಚಲನ ನಡೆಸುವಂತೆ ಮದ್ರಾಸ್ ಹೈಕೋರ್ಟ್ ನಿನ್ನೆ ನಿರ್ಬಂಧ ಹೇರಿತ್ತು. ಹೀಗಾಗಿ ಆರ್ಎಸ್ಎಸ್ ನಾಳಿನ ಪಥಸಂಚಲನವನ್ನು ರದ್ದುಗೊಳಿಸಿದೆ.
ತೆರೆದ ಪ್ರದೇಶದಲ್ಲಿನ ಪಥಸಂಚಲನ ಕಾಶ್ಮೀರ, ಪಶ್ಚಿಮಬಂಗಾಳ, ಕೇರಳ ಮತ್ತಿತರೆಡೆ ನಡೆಯಲಿದೆ. ಆದರೆ ನ. 6ರಂದು ತಮಿಳುನಾಡಿನಲ್ಲಿ ಪಥಸಂಚಲನ ನಡೆಸುವುದಿಲ್ಲ ಎಂದು ಆರ್ಎಸ್ಎಸ್ ತಿಳಿಸಿದೆ. ಇನ್ನು ಕೋರ್ಟ್ ಸೂಚನೆ ಸ್ವೀಕಾರಾರ್ಹವಲ್ಲ ಎಂದಿರುವ ಆರ್ಎಸ್ಎಸ್, ಆ ಕುರಿತು ಮೇಲ್ಮನವಿ ಸಲ್ಲಿಸಲಿರುವುದಾಗಿ ಹೇಳಿದೆ.
ಹೆಚ್ಚಾಗದ ವೇತನ, ‘108’ ಸಮಸ್ಯೆ: ಮನನೊಂದು ವಿಷ ಕುಡಿದ ಸರ್ಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ