ಬೆಂಗಳೂರು: ತನ್ನ ತಾಯಿ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಅಂವಿಕಲನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಬೆಂಗಳೂರಿನ ಇಂದಿರಾ ನಗರ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.
ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ವೆಂಕಟೇಶ ಎಂಬ ಅಂಗವಿಕಲನ ಮೇಲೆ ಇಬ್ಬರು ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
ನಿನ್ನೆ ಮಧ್ಯಾಹ್ನ ವಿವೇಕಾನಂದ ಮೆಟ್ರೋ ನಿಲ್ದಾಣ ಬಳಿ ತಾಯಿಯ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಇಬ್ಬರು ಮಂಗಳಮುಖಿಯರು ವೆಂಕಟೇಶ್ ಅವರನ್ನು ವಿಡಿಯೋ ಕಾಲ್ನಲ್ಲಿ ಇನ್ನೊಬ್ಬರಿಗೆ ತೋರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳಮುಖಿಯರನ್ನು ಪ್ರಶ್ನಿಸಿದಾಗ ಜಗಳ ಉಂಟಾಗಿದ್ದು ನಂತರ ಮಂಗಳಮುಖಿಯರು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ ವೆಂಕಟೇಶ್, ಘಟನೆ ಸಂಬಂಧ ಇಂದಿರಾನಗರ ಠಾಣೆಗೆ ದೂರು ನೀಡಿದ್ದು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.