ಮಂಡ್ಯ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನಗರಸಭೆ ಕಚೇರಿ ಆವರಣದಲ್ಲಿ ಮಾ.11ರವರೆಗೆ ಆಯೋಜಿಸಿರುವ ಬೀದಿಬದಿ ವ್ಯಾಪಾರಿಗಳ ಸ್ವನಿಧಿ-ಸೇ ಸಮೃದ್ಧಿ ಮೇಳಕ್ಕೆ ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಎಲ್ಲ ರಂಗದಲ್ಲೂ ಮಹಿಳೆಯರು ಸಾಧನೆ ಮಾಡಿ ತೋರಿಸಿಕೊಟ್ಟಿದ್ದಾರೆ. ಬೀದಿ ಬದಿ ವ್ಯಾಪಾರಿಗಳು 10 ಸಾವಿರ ರೂ ಸಾಲ ಪಡೆದು ಅದನ್ನು ತೀರಿಸಿದ್ದಾರೆ. ಈ ಮೂಲಕ ಆರ್ಥಿವಾಗಿ ಸಬಲರಾಗುತ್ತಿದ್ದಾರೆ ಎಂದರು.
ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಎನ್.ಆರ್.ವೇಣುಗೋಪಾಲ್, ಪೌರಾಯುಕ್ತ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಪುಟ್ಟಸ್ವಾಮಿ, ಸದಸ್ಯರಾದ ರವಿ, ಸೌಭಾಗ್ಯ, ಲಲಿತಾ, ಪವಿತ್ರಾ ಬೋರೇಗೌಡ, ರಜಿನಿ, ಶ್ರೀಧರ್, ನಾಗೇಶ್, ಸಮುದಾಯ ಸಂಘಟಕ ಸಿ.ವಿ.ತುಳಸಿದಾಸ್ ಇತರರಿದ್ದರು.