ಬೆಂಗಳೂರು: ಕಳೆದ ವರ್ಷ ಬಿಡುಗಡೆಯಾದ ‘ಶಾರ್ದೂಲ’ ನಂತರ ಚೇತನ್ ಚಂದ್ರ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಈಗ ಅವರು ‘ಪ್ರಭುತ್ವ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಯೂಟ್ಯಬ್ನ ಜಂಕಾರ್ ಮ್ಯೂಸಿಕ್ ಚಾನಲ್ನಲ್ಲಿ ಬಿಡುಗಡೆಯಾಗಿದೆ.
ಇದನ್ನೂ ಓದಿ: ಧರ್ಮಣ್ಣಂಗೆ ‘ರಾಜಯೋಗ’; ನಂಬಿಕೆ-ಮೂಢನಂಬಿಕೆಗಳ ಕುರಿತಾದ ಚಿತ್ರದಲ್ಲಿ ಹೀರೋ …
ಹೆಸರೇ ಹೇಳುವಂತೆ ಇದೊಂದು ರಾಜಕೀಯದ ಕುರಿತಾದ ಸಿನಿಮಾ. ಅದರಲ್ಲೂ ಪ್ರಜಾಪ್ರಭುತ್ವ ಮತ್ತು ಮತದಾನದ ಮಹತ್ವ ಸಾರುವ ಸಿನಿಮಾ. ಈ ಚಿತ್ರಕ್ಕೆ ನಿರ್ಮಾಪಕ ಮೇಘಡಹಳ್ಳಿ ಶಿವಕುಮಾರ್ ಅವರೇ ಕಥೆ ರಚಿಸಿದ್ದಾರೆ. ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡಬೇಕು ಎನ್ನುವ ಅವರು, ‘ಮತದಾನ ಅಮೂಲ್ಯವಾದ್ದದ್ದು. ಹಾಗಾಗಿ ಮತಗಳನ್ನು ಮಾರಾಟ ಮಾಡಿಕೊಳ್ಳಬಾರದು. ಇದೊಂದು ಮತದಾನದ ಮಹತ್ವ ಸಾರುವ ಸಿನಿಮಾ. ಚುನಾವಣೆ ಮೊದಲೇ ಚಿತ್ರವನ್ನು ಬಿಡುಗಡೆ ಮಾಡುವ ಪ್ರಯತ್ನ ನಡೆಯುತ್ತಿದೆ’ ಎನ್ನುತ್ತಾರೆ ಅವರು.
ಚೇತನ್ಗೆ ನಾಯಕನಾಗಿ ಇದು 12ನೇ ಚಿತ್ರವಂತೆ. ಈ ಕುರಿತು ಮಾತನಾಡುವ ಅವರು, ‘ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಒಳ್ಳೆಯ ಕಥೆ ಈ ಚಿತ್ರದಲ್ಲಿದೆ. ರಂಗನಾಥ್ ಅಷ್ಟೇ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ದೊಡ್ಡ ಕಲಾವಿದರ ಬಳಗವೇ ಇದ್ದು, ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ’ ಎನ್ನುತ್ತಾರೆ ಚೇತನ್ ಚಂದ್ರ. ಅವರಿಗೆ ನಾಯಕಿಯಾಗಿ ಪಾವನಾ ಗೌಡ ಅಭಿನಯಿಸಿದ್ದಾರೆ.
ಇದನ್ನೂ ಓದಿ: ಅನೂಪ್ ರೇವಣ್ಣ ರೀ-ಎಂಟ್ರಿ; ‘ಕಬ್ಜ’ದಲ್ಲಿ ಉಪ್ಪಿಗೆ ಬಲಗೈ ಬಂಟ …
‘ಪ್ರಭುತ್ವ’ ಚಿತ್ರದಲ್ಲಿ ನಾಸರ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ಹರೀಶ್ ರಾಯ್, ವಿಜಯ್ ಚೆಂಡೂರ್, ವೀಣಾ ಸುಂದರ್, ರಾಜೇಶ್ ನಟರಂಗ, ಅನಿತಾ ಭಟ್ ಮುಂತಾದವರು ನಟಿಸಿದ್ದು, ಚಿತ್ರಕ್ಕೆ ಎಮಿಲ್ ಸಂಗೀತ ಮತ್ತು ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣವಿದೆ.
ಪ್ರತಿಷ್ಠಿತ ವಿದೇಶಿ ಬ್ರ್ಯಾಂಡ್ಗೆ ಭಾರತದ ಮೊದಲ ರಾಯಭಾರಿಯಾಗಿ ರಶ್ಮಿಕಾ ಆಯ್ಕೆ