ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ಎಂ.ಡಿ. ಡಾ. ಆನಂದ ಸಂಕೇಶ್ವರ ಹಾಗೂ ಕುಟುಂಬ ಸದಸ್ಯರು ಮತದಾನ ಮಾಡಿದರು.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 65ಕ್ಕೂ ಹೆಚ್ಚು ಮಂದಿಯಿಂದ ಏಕಕಾಲಕ್ಕೆ ಮತದಾನ
ಹುಬ್ಬಳ್ಳಿಯ ಕೇಶ್ವಾಪುರದ ಶಿವಗಂಗಾ ಲೇಔಟ್ನ ಮತಗಟ್ಟೆಗೆ ಆಗಮಿಸಿದ ಡಾ. ವಿಜಯ ಸಂಕೇಶ್ವರ, ಪತ್ನಿ ಶ್ರೀಮತಿ ಲಲಿತಾ ಸಂಕೇಶ್ವರ, ಪುತ್ರ ಡಾ. ಆನಂದ ಸಂಕೇಶ್ವರ ಮತ್ತು ಕುಟುಂಬದ ಇತರ ಸದಸ್ಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.