ಲಖನೌ: ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಲವ್ ಜಿಹಾದ್ ಆಧಾರಿತ ಸಿನಿಮಾ ದಿ ಕೇರಳ ಸ್ಟೋರಿ ಚಿತ್ರವು ರಾಷ್ಟ್ರಮಟ್ಟದಲ್ಲಿ ಪರ-ವಿರೋಧದ ಚರ್ಚೆ ಹುಟ್ಟು ಹಾಕಿದೆ.
ಇನ್ನು ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಸಿನಿಮಾವನ್ನು ವೀಕ್ಷಿಸಿದ್ಧಾರೆ.
ಚಿತ್ರತಂಡ ಸಾಥ್
ಇತ್ತೀಚಿಗೆ ಚಿತ್ರತಂಡದ ಸದಸ್ಯರು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ತಮ್ಮ ಚಿತ್ರವನ್ನು ವೀಕ್ಷಿಸುವಂತೆ ಆಹ್ವಾನ ನೀಡಿತ್ತು.
ಚಿತ್ರತಂಡದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಯೋಗಿ ಉತ್ತರಪ್ರದೇಶದಲ್ಲಿ ಸಿನಿಮಾಗೆ ತೆರಿಗೆ ವಿನಾಯ್ತಿಯನ್ನು ಘೋಷಿಸಿದ್ದರು ಮತ್ತು ಶುಕ್ರವಾರ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚಿತ್ರವನ್ನು ವೀಕ್ಷಿಸುವುದಾಗಿ ಹೇಳಿದ್ದರು.
ಇದನ್ನೂ ಓದಿ: ತಿಂಗಳಿಗೆ 30 ಸಾವಿರ ರೂ. ಸಂಬಳ; ಆಸ್ತಿ ಮೌಲ್ಯ 7 ಕೋಟಿ ರೂ. ಮಹಿಳಾ ಅಧಿಕಾರಿ ಕಮಾಲ್!
ವಿಶೇಷ ಪ್ರದರ್ಶನ
ಉತ್ತರಪ್ರದೇಶ ಸರ್ಕಾರ ಆಯೋಜನೆ ಮಾಡಿರುವ ವಿಶೇಷ ಪ್ರದರ್ಶನದಲ್ಲಿ 100 ಮಂದಿ ಪತ್ರಕರ್ತರು, ಲಖನೌ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಉದ್ಯೋಗಿಗಳಿಗೆ ಆಹ್ವಾನ ನೀಡಲಾಗಿತ್ತು.