ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿ, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲಾ ಜವಾಹರ್ ಬಾಲ್ ಮಂಚ್ ಸಂಘಟನೆಯಿಂದ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನ ಹಾಗೂ ಕಡಕ್ ಷಾ ವಲಿ ದರ್ಗಾದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಜಿಲ್ಲೆಯ ನೂತನ ಶಾಸಕರ ಭಾವಚಿತ್ರ ಪ್ರದರ್ಶನದೊಂದಿಗೆ ಶುಭ ಕೋರಲಾಯಿತು.
ಬಾಲಮಂಚ್ನ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಮಾತನಾಡಿ, ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ ಐತಿಹಾಸಿಕ ಸಿದ್ದರಾಮೋತ್ಸವ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ಅಧಿಕಾರಕ್ಕೇರಲು ಕಾರಣವಾಗಿದೆ. ಮಧ್ಯಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಲು ಶ್ರಮವಹಿಸಿದ ಹಿರಿಯರಾದ ಡಾ.ಶಾಮನೂರು ಶಿವಶಂಕರಪ್ಪ ಅಥವಾ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉನ್ನತ ಖಾತೆಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ನೀಡಬೇಕೆಂದು ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜು ಭಂಡಾರಿ, ಎಂ.ಹಾಲೇಶ್, ಮಂಜುಸ್ವಾಮಿ ಕತ್ತಲಗೇರಿ, ಸುರೇಶ್ ಎಂ.ಜಾಧವ್, ಎಚ್. ಹರೀಶ್, ಬಿ.ಹಾಲೇಶ್, ಶಿಲ್ಪಾ ಪರಶುರಾಂ, ಪ್ರೇಮಾ, ರಿಯಾಜುದ್ದೀನ್, ಧನಂಜಯ್ ಇದ್ದರು.
————-