ಬೆಂಗಳೂರು: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಕೆನಡಿಯನ್ ಇಂಟರ್ನ್ಯಾಷನಲ್ ಸ್ಕೂಲ್ ಆಫ್ ಬೆಂಗಳೂರಿನಲ್ಲಿ 12ನೇ ತರಗತಿ ಪಾಸಾಗಿದ್ದು, ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಜರಾಗಿದ್ದರು.
ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅವರ ಮಗ ಧವನ್ ರಾಕೇಶ್ ಕೆನಡಿಯನ್ ಇಂಟರ್ನ್ಯಾಷನಲ್ ಸ್ಕೂಲ್ ಆಫ್ ಬೆಂಗಳೂರಿನಲ್ಲಿ 12ನೇ ತರಗತಿ ಪಾಸಾಗಿದ್ದು, ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಇಂದು ಶಾಲೆಯಲ್ಲಿ ಬೀಳ್ಕೊಡುಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಉಪಸ್ಥಿತರಿದ್ದು, ಬಳಿಕ ಮೊಮ್ಮಗ ಪಾಸಾದ ಖುಷಿಯನ್ನು ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಅಂದು ‘ತಪ್ಪಾಯ್ತು ಕ್ಷಮಿಸಿ’ ಎಂದು ಕೈಮುಗಿದು ಕೇಳಿ ಇಂದು ಮತ್ತದೇ ತಪ್ಪು ಮಾಡಿದ ಜಮೀರ್ ಅಹಮದ್!
ಇದೇ ವಿಧಾನಸಭೆ ಚುನಾವಣೆಯಲ್ಲಿ ವರುಣ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದ ತಾತನ ಪರ ಧವನ್ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದರು. ಆ ಸಂದರ್ಭದಲ್ಲಿ ಧವನ್ ಕನ್ನಡದಲ್ಲಿ ಆಡಿದ್ದ ಮಾತುಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೊಳಗಾಗಿದ್ದವು.
My grandson completed his Class 12 from @cisblearns and the school had a organised a farewell for the graduating class of 2023 at the Canadian International School of Bangalore.
I was happy to be part of the event and congratulated him for completing his class 12. pic.twitter.com/T1XPcZkzSL
— Siddaramaiah (@siddaramaiah) May 21, 2023
ಹೊಸ ಮನೆ ತೋರಿಸಲೆಂದು ಕುಟುಂಬಸ್ಥರನ್ನು ಕರೆದಾಕೆ, ಅವರ ಕಣ್ಮುಂದೆಯೇ ಸಾವಿಗೀಡಾದ್ಲು!; ಆಗಿದ್ದೇನು?