ಬೆಂಗಳೂರು: ರಾಜಧಾನಿಯಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದು ಪ್ರಾಣ ಬಿಟ್ಟಿದ್ದಾನೆ. ಬೊಮ್ಮನಹಳ್ಳಿಯಲ್ಲಿ ಇಂದು ಈ ಪ್ರಕರಣ ನಡೆದಿದೆ. ಮೊಹಮ್ಮದ್ ಹುಸೇನ್ (31) ಸಾವಿಗೀಡಾದ ವ್ಯಕ್ತಿ.
ಬೊಮ್ಮನಹಳ್ಳಿ ಬೇಗೂರು ರಸ್ತೆಯ ಮನೆಯಲ್ಲಿದ್ದ ಮಹಮ್ಮದ್ ಹುಸೇನ್ನನ್ನು ವಶಕ್ಕೆ ಪಡೆಯಲು ಪೊಲೀಸರ ತಂಡ ಹೋಗಿದ್ದಾಗ ಈ ಘಟನೆ ನಡೆದಿದೆ. ನಾಲ್ಕನೇ ಮಹಡಿಯ ಟೇರೆಸ್ನಲ್ಲಿ ಮಹಮ್ಮದ್ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆತ ಕೆಳಕ್ಕೆ ಬಿದ್ದಿದ್ದಾನೆ.
ಇದನ್ನೂ ಓದಿ: ಪೂಜೆಯಿಂದಾಗಿ ಪ್ರಾಣಾಪಾಯದಿಂದ ಪಾರಾದ ಉದ್ಯಮಿ!; ಆಗಿದ್ದೇನು?
ದೂರಿನ ಸಂಬಂಧ ವಿಚಾರಣೆ ನಡೆಸುವ ಸಲುವಾಗಿ ಆತನನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಈಗ ಹಲ್ಲೆ ಆರೋಪ ಕೇಳಿ ಬಂದಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ದಂಪತಿ ಮಧ್ಯೆ ಪ್ರೀತಿ ಇದ್ದರೂ ದಾಂಪತ್ಯ ದ್ರೋಹ; ವಿವಾಹೇತರ ಸಂಬಂಧದ ಬಗ್ಗೆ ಇಲ್ಲ ಪಶ್ಚಾತ್ತಾಪ: ಏನಿದು ಅಧ್ಯಯನ?
ಹೃದಯದ ಶಸ್ತ್ರಚಿಕಿತ್ಸೆ; ಆಸ್ಪತ್ರೆಯಿಂದಲೇ ಕವಿ ಎಚ್ಎಸ್ವಿ ಸಂದೇಶ: ಕಾಳಜಿ ತೋರಿದವರಿಗೆ ಹೇಳಿದ್ದೇನು?